<p><strong>ಬೆಂಗಳೂರು:</strong> ‘ಪಕ್ಷದ ಮಹಾರಾಷ್ಟ್ರ ಉಸ್ತುವಾರಿಯಿಂದ ನನ್ನನ್ನು ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ. ಎಲ್ಲವೂ ನಮ್ಮ ಕೈಯಲ್ಲಿ ಇರುವುದಿಲ್ಲ. ಎಲ್ಲವೂ ನನಗೆ ಸಿಗಬೇಕೆಂಬ ಆಸೆಯೂ ನನಗಿಲ್ಲ. ನಾನು ಒಂದು ತತ್ವಾದರ್ಶ ಹೊಂದಿದವನು’ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾನು ನೆಹರು, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವವನು’ ಎಂದರು.</p>.<p>‘ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಇರಲಿ. ಅದಕ್ಕೆ ನನ್ನ ಒಪ್ಪಿಗೆ ಇದೆ. ನನಗೆ ಹುದ್ದೆ ಸಿಗಲಿಲ್ಲ ಎಂದು ವ್ಯಥೆ ಪಟ್ಟವನೂ ಅಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಆ ದಿಕ್ಕಿನಲ್ಲೇ ನಾನು ಮುನ್ನಡೆದಿರುವವನು’ ಎಂದರು.</p>.<p>‘ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ಆ ಸ್ಥಾನದಲ್ಲಿ ಈಗ ಗುಲಾಂ ನಬಿ ಇದ್ದಾರೆ. ಅದರ ಬಗ್ಗೆ ಹೈಕಮಾಂಡ್ ನಿಲುವು ತೆಗೆದುಕೊಳ್ಳಲಿದೆ. ಹೈಕಮಾಂಡ್ ನಿಲುವಿಗೆ ನಾನು ತಲೆ ಬಾಗುತ್ತೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಕ್ಷದ ಮಹಾರಾಷ್ಟ್ರ ಉಸ್ತುವಾರಿಯಿಂದ ನನ್ನನ್ನು ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ. ಎಲ್ಲವೂ ನಮ್ಮ ಕೈಯಲ್ಲಿ ಇರುವುದಿಲ್ಲ. ಎಲ್ಲವೂ ನನಗೆ ಸಿಗಬೇಕೆಂಬ ಆಸೆಯೂ ನನಗಿಲ್ಲ. ನಾನು ಒಂದು ತತ್ವಾದರ್ಶ ಹೊಂದಿದವನು’ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾನು ನೆಹರು, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವವನು’ ಎಂದರು.</p>.<p>‘ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಇರಲಿ. ಅದಕ್ಕೆ ನನ್ನ ಒಪ್ಪಿಗೆ ಇದೆ. ನನಗೆ ಹುದ್ದೆ ಸಿಗಲಿಲ್ಲ ಎಂದು ವ್ಯಥೆ ಪಟ್ಟವನೂ ಅಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಆ ದಿಕ್ಕಿನಲ್ಲೇ ನಾನು ಮುನ್ನಡೆದಿರುವವನು’ ಎಂದರು.</p>.<p>‘ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ಆ ಸ್ಥಾನದಲ್ಲಿ ಈಗ ಗುಲಾಂ ನಬಿ ಇದ್ದಾರೆ. ಅದರ ಬಗ್ಗೆ ಹೈಕಮಾಂಡ್ ನಿಲುವು ತೆಗೆದುಕೊಳ್ಳಲಿದೆ. ಹೈಕಮಾಂಡ್ ನಿಲುವಿಗೆ ನಾನು ತಲೆ ಬಾಗುತ್ತೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>