ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್. ಮಾರುಕಟ್ಟೆ ಮೇಲ್ಸೇತುವೆಯಿಂದ ₹10 ನೋಟು ಎಸೆದಿದ್ದ ವ್ಯಕ್ತಿ ವಶಕ್ಕೆ

Last Updated 24 ಜನವರಿ 2023, 12:11 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್. ಮಾರುಕಟ್ಟೆ ಮೇಲ್ಸೇತುವೆಯಲ್ಲಿ ನಿಂತು ₹10 ನೋಟುಗಳನ್ನು ಎಸೆದಿದ್ದ ಆರೋಪಿ ಅರುಣ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮೇಲ್ಸೇತುವೆಗೆ ಬಂದಿದ್ದ ಅರುಣ್, ತಮ್ಮ ಬಳಿಯ ಬ್ಯಾಗ್‌ನಲ್ಲಿದ್ದ ನೋಟುಗಳನ್ನು ಕೆಳ ರಸ್ತೆಗೆ ಎಸೆದಿದ್ದರು. ಇವುಗಳನ್ನು ಆರಿಸಿಕೊಳ್ಳಲು ಮುಗಿಬಿದ್ದಿದ್ದರು. ಈ ದೃಶ್ಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

'ಕೊರಳಿಗೆ ಗಡಿಯಾರ ಧರಿಸಿದ್ದ ಅರುಣ್, ಏಕಾಏಕಿ ನೋಟುಗಳನ್ನು ಎರಚಿದ್ದು ಏಕೆ ಎಂಬ ಪ್ರಶ್ನೆ ಮೂಡಿತು. ಸ್ಥಳೀಯರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯೂಟ್ಯೂಬ್ ಚಾನೆಲ್‌ವೊಂದರ ಕಚೇರಿಯಲ್ಲಿದ್ದ ಆರೋಪಿ ಅರುಣ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT