ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹಿರ್ದೆಸೆಗೆ ಹೊರಟಿದ್ದವರ ಸುಲಿಗೆ: ಆರೋಪಿಗಳ ಬಂಧನ

Last Updated 30 ಸೆಪ್ಟೆಂಬರ್ 2022, 2:53 IST
ಅಕ್ಷರ ಗಾತ್ರ

ಬೆಂಗಳೂರು: ಬಹಿರ್ದೆಸೆಗೆ ಹೊರಟಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆರ್.ಕೆ. ಹೆಗಡೆ ನಗರದ ಹಬೀಬ್‌ ಉಲ್ಲಾ ಖಾನ್ (24) ಹಾಗೂ ನದೀಂ ಅಲಿಯಾಸ್ ನಿಗ್ರೊ (20) ಬಂಧಿತರು. ಇವರಿಂದ ಮೊಬೈಲ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಆಗಸ್ಟ್ 4ರಂದು ಮಧ್ಯಾಹ್ನ ಶ್ರೀರಾಂಪುರ ರೈಲ್ವೆ ಗೇಟ್ ಬಳಿ ಬಹಿರ್ದೆಸೆಗೆ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಅಡ್ಡಗಟ್ಟಿ ಜೀವ ಬೆದರಿಕೆಯೊಡ್ಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.’

‘ಸುಲಿಗೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆರೋಪಿ ಹಬೀಬ್‌ ಮಾತ್ರ ಸಿಕ್ಕಿಬಿದ್ದ. ಇನ್ನೊಬ್ಬ ಆರೋಪಿ ನದೀಂನನ್ನು ಠಾಣೆಯೊಂದರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಹಬೀಬ್ ನೀಡಿದ್ದ ಮಾಹಿತಿ ಆಧರಿಸಿ ನದೀಂನನ್ನು ಬಾಡಿ ವಾರಂಟ್ ಮೇಲೆ ಬಂಧಿಸಲಾಯಿತು. ಇಬ್ಬರು ಆರೋಪಿಗಳು ಹಲವೆಡೆ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT