<p><strong>ಬೆಂಗಳೂರು: </strong>ಬಹಿರ್ದೆಸೆಗೆ ಹೊರಟಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರ್.ಕೆ. ಹೆಗಡೆ ನಗರದ ಹಬೀಬ್ ಉಲ್ಲಾ ಖಾನ್ (24) ಹಾಗೂ ನದೀಂ ಅಲಿಯಾಸ್ ನಿಗ್ರೊ (20) ಬಂಧಿತರು. ಇವರಿಂದ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಆಗಸ್ಟ್ 4ರಂದು ಮಧ್ಯಾಹ್ನ ಶ್ರೀರಾಂಪುರ ರೈಲ್ವೆ ಗೇಟ್ ಬಳಿ ಬಹಿರ್ದೆಸೆಗೆ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಅಡ್ಡಗಟ್ಟಿ ಜೀವ ಬೆದರಿಕೆಯೊಡ್ಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.’</p>.<p>‘ಸುಲಿಗೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆರೋಪಿ ಹಬೀಬ್ ಮಾತ್ರ ಸಿಕ್ಕಿಬಿದ್ದ. ಇನ್ನೊಬ್ಬ ಆರೋಪಿ ನದೀಂನನ್ನು ಠಾಣೆಯೊಂದರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಹಬೀಬ್ ನೀಡಿದ್ದ ಮಾಹಿತಿ ಆಧರಿಸಿ ನದೀಂನನ್ನು ಬಾಡಿ ವಾರಂಟ್ ಮೇಲೆ ಬಂಧಿಸಲಾಯಿತು. ಇಬ್ಬರು ಆರೋಪಿಗಳು ಹಲವೆಡೆ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಹಿರ್ದೆಸೆಗೆ ಹೊರಟಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರ್.ಕೆ. ಹೆಗಡೆ ನಗರದ ಹಬೀಬ್ ಉಲ್ಲಾ ಖಾನ್ (24) ಹಾಗೂ ನದೀಂ ಅಲಿಯಾಸ್ ನಿಗ್ರೊ (20) ಬಂಧಿತರು. ಇವರಿಂದ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಆಗಸ್ಟ್ 4ರಂದು ಮಧ್ಯಾಹ್ನ ಶ್ರೀರಾಂಪುರ ರೈಲ್ವೆ ಗೇಟ್ ಬಳಿ ಬಹಿರ್ದೆಸೆಗೆ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಅಡ್ಡಗಟ್ಟಿ ಜೀವ ಬೆದರಿಕೆಯೊಡ್ಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.’</p>.<p>‘ಸುಲಿಗೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆರೋಪಿ ಹಬೀಬ್ ಮಾತ್ರ ಸಿಕ್ಕಿಬಿದ್ದ. ಇನ್ನೊಬ್ಬ ಆರೋಪಿ ನದೀಂನನ್ನು ಠಾಣೆಯೊಂದರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಹಬೀಬ್ ನೀಡಿದ್ದ ಮಾಹಿತಿ ಆಧರಿಸಿ ನದೀಂನನ್ನು ಬಾಡಿ ವಾರಂಟ್ ಮೇಲೆ ಬಂಧಿಸಲಾಯಿತು. ಇಬ್ಬರು ಆರೋಪಿಗಳು ಹಲವೆಡೆ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>