ಸೋಮವಾರ ರಾತ್ರಿ 8.56ಕ್ಕೆ ರೈಲು ಬರುವುದನ್ನು ಕಂಡು ಹಾರಿದ್ದ. ರೈಲಿನ ಕೋಚ್ಗೆ ತಾಗಿ ಪಕ್ಕಕ್ಕೆ ಬಿದ್ದಿದ್ದು, ಬಿಎಂಆರ್ಸಿಎಲ್ ಸಿಬ್ಬಂದಿ ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ವಿದ್ಯುತ್ ಸರಬರಾಜು ಕಡಿತಗೊಳಿಸಲಾಯಿತು. ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ ಮೈಸೂರು ರಸ್ತೆವರೆಗೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಇಲ್ಲದಂತಾಯಿತು. ರಾತ್ರಿ 9.30ರಿಂದ ರೈಲು ಸಂಚಾರ ಆರಂಭಗೊಂಡಿತು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರೊ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.