<p><strong>ಬೆಂಗಳೂರು: </strong>ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿದ ಯುವಕನೊಬ್ಬ ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾನೆ ಎಂದು ಆರೋಪಿಸಿ ಬಸವೇಶ್ವರ ನಗರದ ಮಹಿಳೆಯೊಬ್ಬರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ವಿವಾಹಿತರಾಗಿದ್ದ ಮಹಿಳೆ ಆರು ವರ್ಷದ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಮರು ಮದುವೆಗೆ ಹುಡುಗನನ್ನು ಹುಡುಕುತ್ತಿದ್ದ ಈಕೆ ಮ್ಯಾಟ್ರಿಮೊನಿಯಲ್ ಜಾಲತಾಣದಲ್ಲಿ ಜಾಹೀರಾತು ನೀಡಿದ್ದರು. ಹುಡುಗ ಸಿಗದಿದ್ದರಿಂದ ಜಾಹೀರಾತು ತೆಗೆಸಿದ್ದರು. ಈ ಮಧ್ಯೆ, ಮೊಬೈಲ್ನಲ್ಲಿ ಪರಿಚಿತನಾದ ಹರ್ಷ ಎಂಬಾತ ತಮ್ಮನ್ನು ಹೊಟೇಲ್, ಹುಕ್ಕಾ ಬಾರ್ ಹಾಗೂ ಪಬ್ಗೆ ಕರೆದೊಯ್ಯುತ್ತಿದ್ದ. ದೈಹಿಕ ಸಂಪರ್ಕವನ್ನೂ ಹೊಂದಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಆರೋಪಿತನ್ನ ಚಿಕ್ಕಪ್ಪನ ಮಗ ಚೇತನ್ನನ್ನು ಕರೆದುಕೊಂಡು ಬರುತ್ತಿದ್ದ. ಮನೆಯಲ್ಲೇ ಇಬ್ಬರೂ ಮದ್ಯ ಸೇವಿಸುತ್ತಿದ್ದರು. ಹರ್ಷನ ಚಿಕಿತ್ಸೆಗೆ ಹಣ ಬೇಕೆಂದು ಚೇತನ್ ₹ 1.5 ಲಕ್ಷ ಪಡೆದಿದ್ದ. ಹಣಕ್ಕಾಗಿ ಕಿರುಕುಳ ಹೆಚ್ಚಾದಾಗ ದೂರು ನೀಡಿದೆ. ಪೊಲೀಸರು ವಿಚಾರಣೆ ನಡೆಸಿ ₹ 40 ಸಾವಿರ ವಾಪಸ್ ಕೊಟ್ಟು ಪತ್ರಕ್ಕೆ ಸಹಿ ಪಡೆದುಕೊಂಡರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿದ ಯುವಕನೊಬ್ಬ ಲೈಂಗಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾನೆ ಎಂದು ಆರೋಪಿಸಿ ಬಸವೇಶ್ವರ ನಗರದ ಮಹಿಳೆಯೊಬ್ಬರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ವಿವಾಹಿತರಾಗಿದ್ದ ಮಹಿಳೆ ಆರು ವರ್ಷದ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಮರು ಮದುವೆಗೆ ಹುಡುಗನನ್ನು ಹುಡುಕುತ್ತಿದ್ದ ಈಕೆ ಮ್ಯಾಟ್ರಿಮೊನಿಯಲ್ ಜಾಲತಾಣದಲ್ಲಿ ಜಾಹೀರಾತು ನೀಡಿದ್ದರು. ಹುಡುಗ ಸಿಗದಿದ್ದರಿಂದ ಜಾಹೀರಾತು ತೆಗೆಸಿದ್ದರು. ಈ ಮಧ್ಯೆ, ಮೊಬೈಲ್ನಲ್ಲಿ ಪರಿಚಿತನಾದ ಹರ್ಷ ಎಂಬಾತ ತಮ್ಮನ್ನು ಹೊಟೇಲ್, ಹುಕ್ಕಾ ಬಾರ್ ಹಾಗೂ ಪಬ್ಗೆ ಕರೆದೊಯ್ಯುತ್ತಿದ್ದ. ದೈಹಿಕ ಸಂಪರ್ಕವನ್ನೂ ಹೊಂದಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಆರೋಪಿತನ್ನ ಚಿಕ್ಕಪ್ಪನ ಮಗ ಚೇತನ್ನನ್ನು ಕರೆದುಕೊಂಡು ಬರುತ್ತಿದ್ದ. ಮನೆಯಲ್ಲೇ ಇಬ್ಬರೂ ಮದ್ಯ ಸೇವಿಸುತ್ತಿದ್ದರು. ಹರ್ಷನ ಚಿಕಿತ್ಸೆಗೆ ಹಣ ಬೇಕೆಂದು ಚೇತನ್ ₹ 1.5 ಲಕ್ಷ ಪಡೆದಿದ್ದ. ಹಣಕ್ಕಾಗಿ ಕಿರುಕುಳ ಹೆಚ್ಚಾದಾಗ ದೂರು ನೀಡಿದೆ. ಪೊಲೀಸರು ವಿಚಾರಣೆ ನಡೆಸಿ ₹ 40 ಸಾವಿರ ವಾಪಸ್ ಕೊಟ್ಟು ಪತ್ರಕ್ಕೆ ಸಹಿ ಪಡೆದುಕೊಂಡರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>