ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಮಹಡಿಯಿಂದ ಬಿದ್ದು ಯುವಕ ಸಾವು

Last Updated 10 ಆಗಸ್ಟ್ 2021, 4:11 IST
ಅಕ್ಷರ ಗಾತ್ರ

ಬೆಂಗಳೂರು: ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ಪಾರಿವಾಳ ಹಿಡಿಯಲು ಹೋಗಿ ಕಟ್ಟಡದಿಂದ ಬಿದ್ದು ಉಮರ್ ಫಾರೂಕ್ (19) ಎಂಬುವರು ಮೃತಪಟ್ಟಿದ್ದಾರೆ.

'ಭೂಪಸಂದ್ರದ ನಿವಾಸಿ ಉಮರ್ ಫಾರೂಕ್ ಅವರು ಸೋಮವಾರ ಸಂಜೆ ಪಾರಿವಾಳ ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ' ಎಂದು ಪೊಲೀಸರು ಹೇಳಿದರು.

'ಪಾರಿವಾಳ ಹಿಡಿಯುವುದನ್ನು ಹವ್ಯಾಸ ಮಾಡಿಕೊಂಡಿದ್ದ ಉಮರ್, ಹಲವು ಕಟ್ಟಡಗಳನ್ನು ಏರಿ ಪಾರಿವಾಳ ಹಿಡಿದು ತರುತ್ತಿದ್ದರು. ಸೋಮವಾರ ಸಂಜೆಯೂ ನಾಲ್ಕು ಅಂತಸ್ತಿನ ಕಟ್ಟಡ ಏರಿ‌ ಮಹಡಿಯಲ್ಲಿ ನಿಂತು ಪಾರಿವಾಳ ಹಿಡಿಯುತ್ತಿದ್ದರು. ಅದೇ ಸಂದರ್ಭದಲ್ಲೇ ಆಯತಪ್ಪಿ ಮಹಡಿಯಿಂದ ಬಿದ್ದಿದ್ದರು. ಅದರಿಂದಾಗಿ ತೀವ್ರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ' ಎಂದೂ ತಿಳಿಸಿದರು.

'ಘಟನೆ ಸಂಬಂಧ ಸಂಜಯನಗರ ಠಾಣೆಯಲ್ಲಿ‌ ಎಫ್‌ಐಆರ್ ದಾಖಲಾಗಿದೆ. ತನಿಖೆ ಮುಂದುವರಿದಿದೆ' ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT