‘ಸಂಜೀವ್ ಅವರು ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ದೇವನಹಳ್ಳಿಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಬರುತ್ತಿದ್ದರು. ಇದೇ ಮಾರ್ಗದಲ್ಲೇ ಆಂಬುಲೆನ್ಸ್ ಚಿಕ್ಕಬಳ್ಳಾಪುರದಿಂದ ನಗರಕ್ಕೆ ಬರುತ್ತಿತ್ತು. ಚಾಲಕ ಅತೀ ವೇಗವಾಗಿ ಆಂಬುಲೆನ್ಸ್ ಚಲಾಯಿಸಿದ್ದ. ಜಕ್ಕೂರು ಮೇಲ್ಸೇತುವೆಯಲ್ಲಿ ಎದುರಿಗೆ ಹೊರಟಿದ್ದ ಕಾರಿಗೆ ಆಂಬುಲೆನ್ಸ್ ಗುದ್ದಿತ್ತು. ನಂತರ, ಅದೇ ಕಾರು ಎದುರಿಗೆ ಹೊರಟಿದ್ದ ಆಟೊಗೆ ಡಿಕ್ಕಿ ಹೊಡೆದಿತ್ತು. ಸರಣಿ ಅಪಘಾತದಿಂದಾಗಿ ಕಾರಿನಲ್ಲಿದ್ದ ಸಂಜೀವ್ಕುಮಾರ್ ಹಾಗೂ ಆಟೊದಲ್ಲಿದ್ದ ಯಾರಬ್ ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೀವ್ ಅಸುನೀಗಿದ್ದಾರೆ’ ಎಂದು ತಿಳಿಸಿದರು.