ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ | ಮರಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

Published 8 ಆಗಸ್ಟ್ 2023, 14:30 IST
Last Updated 8 ಆಗಸ್ಟ್ 2023, 14:30 IST
ಅಕ್ಷರ ಗಾತ್ರ

ಬೆಂಗಳೂರು: ಯಶವಂತಪುರದ ಬಳಿ ಮರಕ್ಕೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವೇಗವಾಗಿ ಬಂದ ಬೈಕ್‌ ನಿಯಂತ್ರಣ ಕಳೆದುಕೊಂಡ ಪರಿಣಾಮ ಮರಕ್ಕೆ ಡಿಕ್ಕಿಯಾಗಿ ತ್ರಿಪುರಾದ ಬಿಜ್ಜು ಸೇಲ್ಫ ಎಂಬುವರು ಮೃತಪಟ್ಟಿದ್ದಾರೆ.

ಇವರು ಮಲ್ಲೇಶ್ವರದಲ್ಲಿರುವ ಕಾಂಗ್ರೆಸ್‌ ಮುಖಂಡರೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ತ್ರಿಪುರಾದಿಂದ ಬಂದಿದ್ದ ಸ್ನೇಹಿತರೊಬ್ಬರನ್ನು ಯಶವಂತಪುರ ರೈಲು ನಿಲ್ದಾಣಕ್ಕೆ ಬಿಟ್ಟು ಮಲ್ಲೇಶ್ವರಕ್ಕೆ ವಾಪಸ್‌ ಬರುವಾಗ ಈ ಘಟನೆ ನಡೆದಿದೆ. ಯಶವಂತಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT