ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಲಾರಿ -ಸ್ಕೂಟರ್‌ ನಡುವೆ ಡಿಕ್ಕಿ, ವೃದ್ಧ ಸಾವು

Published 21 ಜನವರಿ 2024, 14:07 IST
Last Updated 21 ಜನವರಿ 2024, 14:07 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಪಾಳ್ಯ ರಸ್ತೆಯಲ್ಲಿ ಕಸ ತುಂಬಿದ್ದ ಲಾರಿ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ ಚಲಾಯಿಸುತ್ತಿದ್ದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಈಜಿಪುರದ ನಿವಾಸಿ ಜಾರ್ಜ್‌ (63) ಮೃತಪಟ್ಟವರು.

ಹೊಸಪಾಳ್ಯ ರಸ್ತೆಯ ಉಜಾಲ ಕಾರ್ಖಾನೆ ಬಳಿ ಅಪಘಾತ ಸಂಭವಿಸಿದೆ. ಜಾರ್ಜ್‌ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು ಎಂದು ಪೊಲೀಸರು ಹೇಳಿದರು.

‘ಚಾಲಕ ಲಾರಿಯನ್ನು ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಅಪಘಾತ ಮಾಡಿದ್ಧಾರೆ ಎಂದು ಮೃತರ ಸಂಬಂಧಿಕರು ದೂರು ನೀಡಿದ್ಧಾರೆ. ತನಿಖೆ ಮುಂದುವರಿದಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT