ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಕಳುಹಿಸದಿದ್ದಕ್ಕೆ, ಅತ್ತಿಗೆಯನ್ನೇ ಕೊಂದ

Last Updated 15 ನವೆಂಬರ್ 2020, 21:02 IST
ಅಕ್ಷರ ಗಾತ್ರ

ಬೆಂಗಳೂರು: ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಲಾವಣ್ಯ (37) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿ ವಿಜಯಕುಮಾರ್ ಎಂಬಾತ, ಕೃತ್ಯದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

‘ಭಾನುವಾರ ಬೆಳಿಗ್ಗ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ವಿಜಯಕುಮಾರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ. ಶರಣಪ್ಪ ತಿಳಿಸಿದರು.

‘ಮೃತ ಲಾವಣ್ಯ, ಟಿನ್‌ ಫ್ಯಾಕ್ಟರಿ ನಿವಾಸಿ ವಾಸುದೇವನ್‌ ಎಂಬುವರ ಪತ್ನಿ. ವಾಸುದೇವನ್‌ ಅವರ ಸಹೋದರಿಯನ್ನು, ಟೇಲರ್ ಆಗಿದ್ದ ವಿಜಯಕುಮಾರ್ ಮದುವೆಯಾಗಿದ್ದ. ಆರಂಭದಲ್ಲಿ ಚೆನ್ನಾಗಿದ್ದ ದಂಪತಿ, ಇತ್ತೀಚೆಗೆ ಜಗಳವಾಡಲಾರಂಭಿಸಿದ್ದರು. ವಿಜಯಕುಮಾರ್‌ನನ್ನು ತೊರೆದಿದ್ದ ಪತ್ನಿ, ಸಹೋದರ ವಾಸುದೇವನ್‌ ಮನೆಯಲ್ಲಿ ಉಳಿದುಕೊಂಡಿದ್ದರು. ವಿಜಯಕುಮಾರ್ ವಿರುದ್ಧ ಬಸವನಗುಡಿ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದರು.’

‘ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲೆಂದು ವಿಜಯಕುಮಾರ್, ಭಾವ ವಾಸುದೇವನ್ ಮನೆಗೆ ಬಂದಿದ್ದ. ಆದರೆ, ವಾಸುದೇವನ್ ಮನೆಯಲ್ಲಿ ಇರಲಿಲ್ಲ. ಅವರ ಪತ್ನಿ ಲಾವಣ್ಯ ಇದ್ದರು. ತನ್ನ ಪತ್ನಿಯನ್ನು ಜೊತೆಗೆ ಕಳುಹಿಸುವಂತೆ ಆರೋಪಿ ಒತ್ತಾಯಿಸಿದ್ದ. ಅದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿ, ಪತ್ನಿಯ ಅತ್ತಿಗೆಯಾದ ಲಾವಣ್ಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದ. ತೀವ್ರವಾಗಿ ಗಾಯಗೊಂಡ ಲಾವಣ್ಯ ಸ್ಥಳದಲ್ಲೇ ಮೃತಪಟ್ಟಿದ್ದರು’ ಎಂದೂ ಶರಣಪ್ಪ ಹೇಳಿದರು.’

’ಆರೋಪಿ ವಿಜಯ್, ಅದೇ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಂಡಿದ್ದ. ಪತ್ನಿ ಹಾಗೂ ಸ್ಥಳೀಯರೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT