<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆ ಠಾಣಾ ವ್ಯಾಪ್ತಿಯ ಮಂಜುನಾಥ ನಗರದ ವಿಜಯಲಕ್ಷ್ಮೀ ಬಡಾವಣೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p><p>ನಟರಾಜ್ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು ಪರೀಕ್ಷಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಹಾಸನದ ಮೋಹನ್ (45) ಕೊಲೆಯಾದವರು. ನಾಲ್ಕೈದು ದಿನಗಳ ಹಿಂದೆ ಕೊಲೆ ನಡೆದಿರಬೇಕು ಎಂದು ಅಂದಾಜಿಸಲಾಗಿದೆ.</p><p>ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಬಿಂದು ಅಲಿಯಾಸ್ ಊರ್ವಶಿ ಎಂಬವವರು ಈ ಮನೆ<br>ಬಾಡಿಗೆಗೆ ಪಡೆದಿದ್ದರು. ತಾನು ಸಿನಿಮಾ ಸಹನಿರ್ದೇಶಕಿ ಎಂದು ಊರ್ವಶಿ ಪರಿಚಯಿಸಿಕೊಂಡಿದ್ದರು. ಬಾಡಿಗೆಗೆ ನೀಡಿರುವ ಬಗ್ಗೆ ಕರಾರುಪತ್ರ ಮಾಡಿಸಲು ಮುಂದಾದಾಗ ಮುಂದಿನ ತಿಂಗಳು ಮನೆ ಖಾಲಿ ಮಾಡುವುದಾಗಿ ತಿಳಿಸಿದ್ದರಿಂದ ಕರಾರು ಮಾಡಿಕೊಂಡಿರಲಿಲ್ಲ ಎಂದು ಮನೆ ಮಾಲೀಕರು ತಿಳಿಸಿದ್ದಾರೆ.</p><p>ಆ ಬಳಿಕ ನಟರಾಜ್ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರುತ್ತಿತ್ತು. ಅಕ್ಕಪಕ್ಕದ ನಿವಾಸಿಗಳಿಗೆ ವಾಸನೆ ಬಂದಿದ್ದರಿಂದ ಅವರು ನಟರಾಜ್ ಅವರ ಮಗ ರವಿಕಿರಣ್ಗೆ ಕರೆ ಮಾಡಿ ತಿಳಿಸಿದ್ದರು. ಅವರು ಬಂದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.</p>
<p><strong>ಪೀಣ್ಯ ದಾಸರಹಳ್ಳಿ:</strong> ಬಾಗಲಗುಂಟೆ ಠಾಣಾ ವ್ಯಾಪ್ತಿಯ ಮಂಜುನಾಥ ನಗರದ ವಿಜಯಲಕ್ಷ್ಮೀ ಬಡಾವಣೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.</p><p>ನಟರಾಜ್ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು ಪರೀಕ್ಷಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಹಾಸನದ ಮೋಹನ್ (45) ಕೊಲೆಯಾದವರು. ನಾಲ್ಕೈದು ದಿನಗಳ ಹಿಂದೆ ಕೊಲೆ ನಡೆದಿರಬೇಕು ಎಂದು ಅಂದಾಜಿಸಲಾಗಿದೆ.</p><p>ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಬಿಂದು ಅಲಿಯಾಸ್ ಊರ್ವಶಿ ಎಂಬವವರು ಈ ಮನೆ<br>ಬಾಡಿಗೆಗೆ ಪಡೆದಿದ್ದರು. ತಾನು ಸಿನಿಮಾ ಸಹನಿರ್ದೇಶಕಿ ಎಂದು ಊರ್ವಶಿ ಪರಿಚಯಿಸಿಕೊಂಡಿದ್ದರು. ಬಾಡಿಗೆಗೆ ನೀಡಿರುವ ಬಗ್ಗೆ ಕರಾರುಪತ್ರ ಮಾಡಿಸಲು ಮುಂದಾದಾಗ ಮುಂದಿನ ತಿಂಗಳು ಮನೆ ಖಾಲಿ ಮಾಡುವುದಾಗಿ ತಿಳಿಸಿದ್ದರಿಂದ ಕರಾರು ಮಾಡಿಕೊಂಡಿರಲಿಲ್ಲ ಎಂದು ಮನೆ ಮಾಲೀಕರು ತಿಳಿಸಿದ್ದಾರೆ.</p><p>ಆ ಬಳಿಕ ನಟರಾಜ್ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರುತ್ತಿತ್ತು. ಅಕ್ಕಪಕ್ಕದ ನಿವಾಸಿಗಳಿಗೆ ವಾಸನೆ ಬಂದಿದ್ದರಿಂದ ಅವರು ನಟರಾಜ್ ಅವರ ಮಗ ರವಿಕಿರಣ್ಗೆ ಕರೆ ಮಾಡಿ ತಿಳಿಸಿದ್ದರು. ಅವರು ಬಂದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದರು.</p>