‘ಜಾಮೀನು ಪಡೆದಿದ್ದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಗೈರಾಗುತ್ತಿದ್ದ. ನೋಟಿಸ್ ನೀಡಿದರೂ ವಿಚಾರಣೆಗೆ ಬಂದಿರಲಿಲ್ಲ. ಅವಾಗಲೇ ಜಾಮೀನುದಾರ ಬಸವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಬಸವಕುಮಾರ್, ‘ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರಿನಲ್ಲಿ ದಾಖಲೆ ನೀಡಿ ಆರೋಪಿಗೆ ಜಾಮೀನು ಕೊಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದರು. ಅವರ ಮನವಿ ಪರಿಷ್ಕರಿಸಿದ ನ್ಯಾಯಾಲಯ, ನಕಲಿ ದಾಖಲೆ ಸೃಷ್ಟಿಸಿ ಜಾಮೀನು ಕೊಡಿಸಿರುವ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು’ ಎಂದು ಹೇಳಿದರು.