ರಾಕೇಶ್, ಅಂಗಡಿಗಳಿಗೆ ಕುಡಿಯುವ ನೀರಿನ ಬಾಟಲಿಗಳನ್ನು ಸರಬರಾಜು ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ರಾತ್ರಿ 10.30ರ ಸುಮಾರಿಗೆ ಮನೆಗೆ ನಡೆದು ಹೋಗುತ್ತಿದ್ದಾಗ, ರಂಜಿತ್ ಹಾಗೂ ಮಣಿ ಎದುರಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಅವರು, ವಿನಾಕಾರಣ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೆರಳಿ ರಾಕೇಶ್ ಕೂಡ ವಾಗ್ವಾದ ನಡೆಸಿದ್ದಾನೆ.