ಬೆಂಗಳೂರು: ಸಂಪಿಗೆಹಳ್ಳಿ ಠಾಣೆವ್ಯಾಪ್ತಿಯಲ್ಲಿರುವ ಕಟ್ಟಡವೊಂದರ 14ನೇ ಮಹಡಿಯಿಂದ ಜಿಗಿದು ಹೃತಿಕ್ ಈಶ್ವರ್ (21) ಎಂಬುವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಬಿಹಾರದ ಹೃತಿಕ್, ನಿರ್ಮಾಣ ಹಂತದ ಕಟ್ಟಡಗಳಲ್ಲಿ ಬಡಿಗೆ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿದ್ದೇವೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.
‘ಮಾನ್ಯತಾ ಟೆಕ್ ಪಾರ್ಕ್ ಬಳಿ ಬಹು ಮಹಡಿ ಕಟ್ಟಡ ನಿರ್ಮಿಸಲಾಗುತ್ತಿತ್ತು. ಅದೇ ಕಟ್ಟಡದ 14ನೇ ಮಹಡಿಗೆ ಹೋಗಿದ್ದ ಹೃತಿಕ್, ಅಲ್ಲಿಂದಲೇ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.