‘ಮಾರ್ಚ್ 17ರಂದು ನಡೆದ ಗಲಾಟೆ ವಿಕೋಪಕ್ಕೆ ಹೋಗಿತ್ತು. ಸುಧಾರಾಣಿ ಮೇಲೆ ಹಲ್ಲೆ ಮಾಡಿದ್ದ ಹರ್ಷ್, ತಲೆಯನ್ನು ಗೋಡೆಗೆ ಗುದ್ದಿಸಿದ್ದ. ತಲೆಗಪೆಟ್ಟಾಗಿದ್ದರಿಂದ ಸುಧಾರಾಣಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಬಳಿಕ, ಹರ್ಷ್ ಸಹ ಚಾಕುವಿನಿಂದ ಕತ್ತು ಕೊಯ್ದುಕೊಂಡಿದ್ದ. ಅದನ್ನು ನೋಡಿದ್ದ ಮಗ, ಹೊರಗೆ ಓಡಿ ಬಂದು ಚೀರಾಡಿದ್ದ. ಸ್ಥಳೀಯರೇ ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಸದ್ಯ ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ಪೊಲೀಸರು ಹೇಳಿದರು.