<p><strong>ಬೆಂಗಳೂರು:</strong> ರಾಜ್ಯ ಪೊಲೀಸರು ಜಾರಿಗೆ ತಂದಿರುವ ‘ಮನೆ–ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಅವರು ಗೋವಿಂದರಾಜನಗರದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ದೇಶದಲ್ಲಿಯೇ ಪ್ರಥಮ ಬಾರಿಗೆ ಮನೆ–ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಬೇರೆ ಯಾವ ರಾಜ್ಯದಲ್ಲಿಯೂ ಸಹ ಈ ರೀತಿಯ ಕಾರ್ಯಕ್ರಮ ಇಲ್ಲ. ಇದುವರೆಗೂ ಪೊಲೀಸರು ಬಡಾವಣೆಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಡೆಸುತ್ತಿದ್ದರು. ಮುಂದಿನ ದಿನಗಳಲ್ಲಿ ಯಾವ ಮನೆಗೆ ಯಾರು ಬಂದಿದ್ದಾರೆ, ಮನೆಯವರು ಏನು ಕೆಲಸ ಮಾಡುತ್ತಿದ್ದಾರೆ. ಯಾವ ಸಮಸ್ಯೆಗಳಿವೆ ಎಂಬ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಈ ದತ್ತಾಂಶ ಪೊಲೀಸರ ಬಳಿ ಇರಲಿದೆ’ ಎಂದು ಹೇಳಿದರು.</p>.<p>‘ನೆರೆ–ಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ, ಮಕ್ಕಳಿಗೆ ತೊಂದರೆ ಆಗುತ್ತಿದ್ದರೆ, ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದರೆ ಆ ಮಾಹಿತಿಯನ್ನು ಪೊಲೀಸರ ಜತೆಗೆ ನಾಗರಿಕರು ಹಂಚಿಕೊಳ್ಳಬಹುದು. ಗಸ್ತು ಸಿಬ್ಬಂದಿಗೆ ಟ್ಯಾಬ್ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳಲಾಗುವುದು. ನಂತರ, ಬದಲಾವಣೆ ಮಾಡುವುದಿದ್ದರೆ ಸರಿಪಡಿಸುತ್ತೇವೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಮಾಡಲಾಗುವುದು. ಪೊಲೀಸ್ ಸಿಬ್ಬಂದಿಯೇ ಟೋಯಿಂಗ್ ಮಾಡಲಿದ್ದಾರೆ. ಟೋಯಿಂಗ್ಗೆ ಪಾಲಿಕೆಯಿಂದ ವಾಹನಗಳನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>ನಿರ್ಭಯಾ ಯೋಜನೆ ಅಡಿ ನಗರದಲ್ಲಿ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸೇಫ್ ಐ– ಲ್ಯಾಂಡ್ಗಳನ್ನು ಸ್ಥಾಪಿಸಲಾಗಿದೆ. ಡ್ರಗ್ಸ್ ಮುಕ್ತ ಬೆಂಗಳೂರು ಮಾಡುತ್ತೇವೆ ಎಂದರು.</p>.<p>ಇದೇ ವೇಳೆ ಕೆಲವು ಜಿಲ್ಲೆಗಳ ಎಸ್ಪಿ ಹಾಗೂ ಪೊಲೀಸ್ ಕಮಿಷನರ್ಗಳೊಂದಿಗೆ ಸಂವಾದ ನಡೆಸಿ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಕೈಪಿಡಿ ಬಿಡುಗಡೆ ಮಾಡಲಾಯಿತು. </p>.<p>ಪೊಲೀಸ್ ಅಧಿಕಾರಿಗಳ ಜತೆಗೆ ಗೋವಿಂದರಾಜನಗರದ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಸಚಿವರು ಮಾಹಿತಿ ಪಡೆದುಕೊಂಡರು.</p>.<p>ಶಾಸಕ ಪ್ರಿಯಕೃಷ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹಾಜರಿದ್ದರು.</p>.<div><blockquote>ಮಹಿಳೆಯರು ತೊಂದರೆಯಲ್ಲಿದ್ದಾಗ ಪೊಲೀಸರು ಕೂಡಲೇ ಸ್ಪಂದಿಸುತ್ತಿದ್ದಾರೆ. ಬೆಂಗಳೂರನ್ನು ಮಹಿಳೆಯರ ಸುರಕ್ಷತಾ ನಗರವನ್ನಾಗಿ ಮಾಡುತ್ತೇವೆ </blockquote><span class="attribution">– ಜಿ.ಪರಮೇಶ್ವರ ಗೃಹ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಪೊಲೀಸರು ಜಾರಿಗೆ ತಂದಿರುವ ‘ಮನೆ–ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಅವರು ಗೋವಿಂದರಾಜನಗರದಲ್ಲಿ ಶುಕ್ರವಾರ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ದೇಶದಲ್ಲಿಯೇ ಪ್ರಥಮ ಬಾರಿಗೆ ಮನೆ–ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಬೇರೆ ಯಾವ ರಾಜ್ಯದಲ್ಲಿಯೂ ಸಹ ಈ ರೀತಿಯ ಕಾರ್ಯಕ್ರಮ ಇಲ್ಲ. ಇದುವರೆಗೂ ಪೊಲೀಸರು ಬಡಾವಣೆಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಡೆಸುತ್ತಿದ್ದರು. ಮುಂದಿನ ದಿನಗಳಲ್ಲಿ ಯಾವ ಮನೆಗೆ ಯಾರು ಬಂದಿದ್ದಾರೆ, ಮನೆಯವರು ಏನು ಕೆಲಸ ಮಾಡುತ್ತಿದ್ದಾರೆ. ಯಾವ ಸಮಸ್ಯೆಗಳಿವೆ ಎಂಬ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಈ ದತ್ತಾಂಶ ಪೊಲೀಸರ ಬಳಿ ಇರಲಿದೆ’ ಎಂದು ಹೇಳಿದರು.</p>.<p>‘ನೆರೆ–ಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ, ಮಕ್ಕಳಿಗೆ ತೊಂದರೆ ಆಗುತ್ತಿದ್ದರೆ, ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದರೆ ಆ ಮಾಹಿತಿಯನ್ನು ಪೊಲೀಸರ ಜತೆಗೆ ನಾಗರಿಕರು ಹಂಚಿಕೊಳ್ಳಬಹುದು. ಗಸ್ತು ಸಿಬ್ಬಂದಿಗೆ ಟ್ಯಾಬ್ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು.</p>.<p>‘ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳಲಾಗುವುದು. ನಂತರ, ಬದಲಾವಣೆ ಮಾಡುವುದಿದ್ದರೆ ಸರಿಪಡಿಸುತ್ತೇವೆ’ ಎಂದು ಹೇಳಿದರು.</p>.<p>‘ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಮಾಡಲಾಗುವುದು. ಪೊಲೀಸ್ ಸಿಬ್ಬಂದಿಯೇ ಟೋಯಿಂಗ್ ಮಾಡಲಿದ್ದಾರೆ. ಟೋಯಿಂಗ್ಗೆ ಪಾಲಿಕೆಯಿಂದ ವಾಹನಗಳನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>ನಿರ್ಭಯಾ ಯೋಜನೆ ಅಡಿ ನಗರದಲ್ಲಿ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸೇಫ್ ಐ– ಲ್ಯಾಂಡ್ಗಳನ್ನು ಸ್ಥಾಪಿಸಲಾಗಿದೆ. ಡ್ರಗ್ಸ್ ಮುಕ್ತ ಬೆಂಗಳೂರು ಮಾಡುತ್ತೇವೆ ಎಂದರು.</p>.<p>ಇದೇ ವೇಳೆ ಕೆಲವು ಜಿಲ್ಲೆಗಳ ಎಸ್ಪಿ ಹಾಗೂ ಪೊಲೀಸ್ ಕಮಿಷನರ್ಗಳೊಂದಿಗೆ ಸಂವಾದ ನಡೆಸಿ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಕೈಪಿಡಿ ಬಿಡುಗಡೆ ಮಾಡಲಾಯಿತು. </p>.<p>ಪೊಲೀಸ್ ಅಧಿಕಾರಿಗಳ ಜತೆಗೆ ಗೋವಿಂದರಾಜನಗರದ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಸಚಿವರು ಮಾಹಿತಿ ಪಡೆದುಕೊಂಡರು.</p>.<p>ಶಾಸಕ ಪ್ರಿಯಕೃಷ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹಾಜರಿದ್ದರು.</p>.<div><blockquote>ಮಹಿಳೆಯರು ತೊಂದರೆಯಲ್ಲಿದ್ದಾಗ ಪೊಲೀಸರು ಕೂಡಲೇ ಸ್ಪಂದಿಸುತ್ತಿದ್ದಾರೆ. ಬೆಂಗಳೂರನ್ನು ಮಹಿಳೆಯರ ಸುರಕ್ಷತಾ ನಗರವನ್ನಾಗಿ ಮಾಡುತ್ತೇವೆ </blockquote><span class="attribution">– ಜಿ.ಪರಮೇಶ್ವರ ಗೃಹ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>