‘ಕೋವಿಡ್ ಮೊದಲೆರಡು ಅಲೆಯಲ್ಲಿ ಮುಂಚೂಣಿ ಕಾರ್ಯಕರ್ತರು ಪ್ರಾಣ ಭಯವನ್ನು ತೊರೆದು, ಕಾರ್ಯನಿರ್ವಹಿಸಿದ್ದಾರೆ. ಈಗ ಸೋಂಕು ಮತ್ತೆ ಹರಡಲಾರಂಭಿಸಿದೆ. ಮುಂದೆ ಎದುರಾಗುವ ಸವಾಲುಗಳನ್ನು ಎದುರಿಸಲು ಲಸಿಕೆ ಸಹಕಾರಿ. ಆದ್ದರಿಂದ ಆದ್ಯತೆ ಅನುಸಾರ ಲಸಿಕೆ ನೀಡಲು ಮುಂದಾಗಿದ್ದೇವೆ’ ಎಂದು ಆಸ್ಪ್ರತ್ರೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಕಾರ್ತಿಕ್ ರಾಜಗೋಪಾಲ್ ತಿಳಿಸಿದ್ದಾರೆ.