<p><strong>ಬೆಂಗಳೂರು: ‘</strong>ಹೆಚ್ಚಿನ ಶಿಕ್ಷಕರಲ್ಲಿ ದೀರ್ಘಕಾಲದ ಬೆನ್ನು ಮತ್ತು ಕುತ್ತಿಗೆ ನೋವು, ಕೀಲು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ’ ಎಂದು ಕನಕಪುರ ರಸ್ತೆಯ ಮಣಿಪಾಲ ಆಸ್ಪತ್ರೆ ವೈದ್ಯರು ಕಳವಳ ವ್ಯಕ್ತಪಡಿಸಿದರು. </p>.<p>ಆಸ್ಪತ್ರೆಯು ನಗರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಶಿಕ್ಷಕರಿಗಾಗಿ ರೂಪಿಸಲಾದ ಗುರು ರಕ್ಷಾ, ಗುರು ಶಕ್ತಿ ಮತ್ತು ಗುರು ಸುರಕ್ಷಾ ಪ್ಯಾಕೇಜ್ಗಳ ಅಡಿಯಲ್ಲಿ ಶಿಕ್ಷಕರಿಗೆ ಉಚಿತ ಆರೋಗ್ಯ ಚಿಕಿತ್ಸಾ ಕಾರ್ಡ್ಗಳನ್ನು ನೀಡಿ ಗೌರವಿಸಲಾಯಿತು. </p>.<p>ವೈದ್ಯರಾದ ಡಾ. ರಾಧಾ ಎಸ್. ರಾವ್ ಮತ್ತು ಡಾ. ಭವ್ಯಾ ಎನ್. ಅವರು, ಮಹಿಳೆಯರು ಎದುರಿಸುವ ಅನಾರೋಗ್ಯ ಸಮಸ್ಯೆಗಳು, ಜೀವನಶೈಲಿ ಕಾಯಿಲೆಗಳು ಮತ್ತು ಶಿಕ್ಷಕರು ಯೋಗಕ್ಷೇಮ ಕಾಪಾಡಿಕೊಳ್ಳಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿದರು. </p>.<p>‘ಶಿಕ್ಷಕರಲ್ಲಿ ಧ್ವನಿ ಸಂಬಂಧಿತ ಹಾಗೂ ಕಣ್ಣಿನ ಸಮಸ್ಯೆಗಳು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮಾನಸಿಕ ಒತ್ತಡದಂತಹ ಸಮಸ್ಯೆಗಳು ಸಾಮಾನ್ಯವಾಗಿವೆ. ಈ ಅನಾರೋಗ್ಯ ಸಮಸ್ಯೆಗಳು ಶಿಕ್ಷಕರಲ್ಲಿ ಹೆಚ್ಚುತ್ತಿದ್ದರೂ, ಸರಿಯಾದ ಗಮನ ನೀಡುವವರ ಸಂಖ್ಯೆ ವಿರಳ. ಇದರಿಂದಾಗಿ ಶಿಕ್ಷಕರು ದೀರ್ಘಕಾಲೀನ ಅನಾರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ’ ಎಂದು ವೈದ್ಯರು ಹೇಳಿದರು.</p>.<p>‘ಆಸ್ಪತ್ರೆ ಒದಗಿಸುವ ಈ ವಿಶಿಷ್ಟ ಆರೋಗ್ಯ ಪ್ಯಾಕೇಜ್ಗಳು ಹೃದಯದ ಅಪಾಯಗಳ ಪತ್ತೆಯ ಜತೆಗೆ ವಿವಿಧ ಅನಾರೋಗ್ಯ ಸಮಸ್ಯೆಗಳ ತಪಾಸಣೆಗೆ ಸಹಕಾರಿಯಾಗಲಿವೆ’ ಎಂದರು. </p>.<p>ಆರ್ಎಂಎಸ್ ಇಂಟರ್ನ್ಯಾಷನಲ್ ಸ್ಕೂಲ್, ಶ್ರೀಕುಮಾರನ್ ಪಬ್ಲಿಕ್ ಸ್ಕೂಲ್, ದೆಹಲಿ ಪಬ್ಲಿಕ್ ಸ್ಕೂಲ್, ಇನ್ಸೈಟ್ ಅಕಾಡೆಮಿ ಸ್ಕೂಲ್ ಮತ್ತು ಚೈತನ್ಯ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಹೆಚ್ಚಿನ ಶಿಕ್ಷಕರಲ್ಲಿ ದೀರ್ಘಕಾಲದ ಬೆನ್ನು ಮತ್ತು ಕುತ್ತಿಗೆ ನೋವು, ಕೀಲು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ’ ಎಂದು ಕನಕಪುರ ರಸ್ತೆಯ ಮಣಿಪಾಲ ಆಸ್ಪತ್ರೆ ವೈದ್ಯರು ಕಳವಳ ವ್ಯಕ್ತಪಡಿಸಿದರು. </p>.<p>ಆಸ್ಪತ್ರೆಯು ನಗರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಶಿಕ್ಷಕರಿಗಾಗಿ ರೂಪಿಸಲಾದ ಗುರು ರಕ್ಷಾ, ಗುರು ಶಕ್ತಿ ಮತ್ತು ಗುರು ಸುರಕ್ಷಾ ಪ್ಯಾಕೇಜ್ಗಳ ಅಡಿಯಲ್ಲಿ ಶಿಕ್ಷಕರಿಗೆ ಉಚಿತ ಆರೋಗ್ಯ ಚಿಕಿತ್ಸಾ ಕಾರ್ಡ್ಗಳನ್ನು ನೀಡಿ ಗೌರವಿಸಲಾಯಿತು. </p>.<p>ವೈದ್ಯರಾದ ಡಾ. ರಾಧಾ ಎಸ್. ರಾವ್ ಮತ್ತು ಡಾ. ಭವ್ಯಾ ಎನ್. ಅವರು, ಮಹಿಳೆಯರು ಎದುರಿಸುವ ಅನಾರೋಗ್ಯ ಸಮಸ್ಯೆಗಳು, ಜೀವನಶೈಲಿ ಕಾಯಿಲೆಗಳು ಮತ್ತು ಶಿಕ್ಷಕರು ಯೋಗಕ್ಷೇಮ ಕಾಪಾಡಿಕೊಳ್ಳಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿದರು. </p>.<p>‘ಶಿಕ್ಷಕರಲ್ಲಿ ಧ್ವನಿ ಸಂಬಂಧಿತ ಹಾಗೂ ಕಣ್ಣಿನ ಸಮಸ್ಯೆಗಳು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮಾನಸಿಕ ಒತ್ತಡದಂತಹ ಸಮಸ್ಯೆಗಳು ಸಾಮಾನ್ಯವಾಗಿವೆ. ಈ ಅನಾರೋಗ್ಯ ಸಮಸ್ಯೆಗಳು ಶಿಕ್ಷಕರಲ್ಲಿ ಹೆಚ್ಚುತ್ತಿದ್ದರೂ, ಸರಿಯಾದ ಗಮನ ನೀಡುವವರ ಸಂಖ್ಯೆ ವಿರಳ. ಇದರಿಂದಾಗಿ ಶಿಕ್ಷಕರು ದೀರ್ಘಕಾಲೀನ ಅನಾರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ’ ಎಂದು ವೈದ್ಯರು ಹೇಳಿದರು.</p>.<p>‘ಆಸ್ಪತ್ರೆ ಒದಗಿಸುವ ಈ ವಿಶಿಷ್ಟ ಆರೋಗ್ಯ ಪ್ಯಾಕೇಜ್ಗಳು ಹೃದಯದ ಅಪಾಯಗಳ ಪತ್ತೆಯ ಜತೆಗೆ ವಿವಿಧ ಅನಾರೋಗ್ಯ ಸಮಸ್ಯೆಗಳ ತಪಾಸಣೆಗೆ ಸಹಕಾರಿಯಾಗಲಿವೆ’ ಎಂದರು. </p>.<p>ಆರ್ಎಂಎಸ್ ಇಂಟರ್ನ್ಯಾಷನಲ್ ಸ್ಕೂಲ್, ಶ್ರೀಕುಮಾರನ್ ಪಬ್ಲಿಕ್ ಸ್ಕೂಲ್, ದೆಹಲಿ ಪಬ್ಲಿಕ್ ಸ್ಕೂಲ್, ಇನ್ಸೈಟ್ ಅಕಾಡೆಮಿ ಸ್ಕೂಲ್ ಮತ್ತು ಚೈತನ್ಯ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>