ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಣಿಪುರ ಹೊತ್ತಿ ಉರಿದರೂ ಮೌನವಾಗಿದ್ದ ಪ್ರಧಾನಿ ಮೋದಿ: ತುಷಾರ್ ಗಾಂಧಿ ಟೀಕೆ

Published : 24 ಆಗಸ್ಟ್ 2024, 15:56 IST
Last Updated : 24 ಆಗಸ್ಟ್ 2024, 15:56 IST
ಫಾಲೋ ಮಾಡಿ
Comments
ಗಾಂಧೀಜಿ ಕೊಂದವರು ಅಸಮಾನತೆ ಪೋಷಕರು: ಸಿ.ಎಂ
‘ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಅವರನ್ನು ಕೊಂದರು‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಚಾರ ಸಂಕಿರಣ ಉದ್ಘಾಟಿಸಿದ ಅವರು ‘ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು. ಪ್ರಕೃತಿ ಮನುಷ್ಯನ ಅಗತ್ಯಗಳನ್ನು ಈಡೇರಿಸುತ್ತದೆ ದುರಾಸೆಗಳನ್ನಲ್ಲ ಎನ್ನುವುದು ಗಾಂಧೀಜಿ ನಂಬಿಕೆಯಾಗಿತ್ತು. ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣ ಎಂದು ಹೇಳಿದರು. ಗಾಂಧೀಜಿ‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT