<p><strong>ಬೆಂಗಳೂರು</strong>: ‘ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ರಾಜ್ಯ ಸರ್ಕಾರವು ಸ್ಫೂರ್ತಿ ಗೀತೆಯೆಂದು ಘೋಷಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದರು. </p>.<p>ಕರ್ನಾಟಕ ವಿಕಾಸರಂಗ ಹಾಗೂ ಕನ್ನಡ ಗೆಳೆಯರ ಬಳಗವು ಜಂಟಿಯಾಗಿ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ–21’ರ ಸರಣಿಯಡಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು 100’ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯಾಗಿ ಹಾಡಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ, ಆಗಿನ ಮರಾಠಿ ವಾತಾವರಣದಲ್ಲಿ ಕನ್ನಡತನವನ್ನು ಬಡಿದೆಬ್ಬಿಸಲು ಸ್ಫೂರ್ತಿಯಾಯಿತು. ಇಂದಿಗೂ ಕನ್ನಡಿಗರ ನಡುವೆ ಈ ಗೀತೆ ಸ್ವಾಭಿಮಾನದ ಪ್ರತೀಕವಾಗಿದೆ. ಈ ಗೀತೆಯನ್ನು ‘ವಂದೇ ಮಾತರಂ’ ಗೀತೆ ಮಾದರಿಯಲ್ಲಿ ಸ್ಫೂರ್ತಿ ಗೀತೆಯಾಗಿ ಘೋಷಿಸಬೇಕು’ ಎಂದು ಒತ್ತಾಯಿಸಿದರು. </p>.<p>ಹುಯಿಲಗೋಳರ ಬಗ್ಗೆ ಉಪನ್ಯಾಸ ನೀಡಿದ ಸಾಹಿತಿ ಚಂದ್ರಶೇಖರ ನಾದೂರ, ‘ದ.ರಾ. ಬೇಂದ್ರೆ ಅವರ ಗುರುಗಳಾಗಿದ್ದ ನಾರಾಯಣರಾಯರು, ನವೋದಯ ಕಾಲದ ಯುವ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದರು. ಅವರು ಈ ಗೀತೆಯಲ್ಲದೆ ಹಲವು ನಾಟಕಗಳು, ಕೀರ್ತನೆಗಳು, ಕಾದಂಬರಿಗಳನ್ನು ಬರೆದಿದ್ದಾರೆ’ ಎಂದರು.</p>.<p>ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ‘ಕರ್ನಾಟಕ ಏಕೀಕರಣ ಹೋರಾಟದ ಜಾಗೃತಿಗೆ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯು ಮೂಲ ಮಂತ್ರವಾಗಿ ಹೊಸ ಆಯಾಮ ನೀಡಿತು. ಈ ಗೀತೆಯ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ಆಚರಿಸಿ, ಎಲ್ಲ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಒಂದು ನಿಗದಿತ ದಿನ ಈ ಹಾಡನ್ನು ಹಾಡುವ ಮೂಲಕ ಗೌರವ ಸಲ್ಲಿಸಬೇಕು’ ಎಂದು ಹೇಳಿದರು.</p>.<p>ಹುಯಿಲಗೋಳ ನಾರಾಯಣರಾಯರ ಮೊಮ್ಮಗಳು ರಾಧಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಗಾಯಕ ಆನಂದ ಮಾದಲಗೆರೆ ಹಾಡಿದರು. ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಉಪಸ್ಥಿತರಿದ್ದರು. </p>.<p>ಕಾರ್ಯಕ್ರಮಕ್ಕೂ ಮೊದಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ರಾಜ್ಯ ಸರ್ಕಾರವು ಸ್ಫೂರ್ತಿ ಗೀತೆಯೆಂದು ಘೋಷಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದರು. </p>.<p>ಕರ್ನಾಟಕ ವಿಕಾಸರಂಗ ಹಾಗೂ ಕನ್ನಡ ಗೆಳೆಯರ ಬಳಗವು ಜಂಟಿಯಾಗಿ ‘ಕನ್ನಡ ಬಾವುಟ ಹಾರಿಸಿದವರು ನೆನಪಿನ ಮಾಲೆ–21’ರ ಸರಣಿಯಡಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು 100’ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. </p>.<p>‘1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯಾಗಿ ಹಾಡಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ, ಆಗಿನ ಮರಾಠಿ ವಾತಾವರಣದಲ್ಲಿ ಕನ್ನಡತನವನ್ನು ಬಡಿದೆಬ್ಬಿಸಲು ಸ್ಫೂರ್ತಿಯಾಯಿತು. ಇಂದಿಗೂ ಕನ್ನಡಿಗರ ನಡುವೆ ಈ ಗೀತೆ ಸ್ವಾಭಿಮಾನದ ಪ್ರತೀಕವಾಗಿದೆ. ಈ ಗೀತೆಯನ್ನು ‘ವಂದೇ ಮಾತರಂ’ ಗೀತೆ ಮಾದರಿಯಲ್ಲಿ ಸ್ಫೂರ್ತಿ ಗೀತೆಯಾಗಿ ಘೋಷಿಸಬೇಕು’ ಎಂದು ಒತ್ತಾಯಿಸಿದರು. </p>.<p>ಹುಯಿಲಗೋಳರ ಬಗ್ಗೆ ಉಪನ್ಯಾಸ ನೀಡಿದ ಸಾಹಿತಿ ಚಂದ್ರಶೇಖರ ನಾದೂರ, ‘ದ.ರಾ. ಬೇಂದ್ರೆ ಅವರ ಗುರುಗಳಾಗಿದ್ದ ನಾರಾಯಣರಾಯರು, ನವೋದಯ ಕಾಲದ ಯುವ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದರು. ಅವರು ಈ ಗೀತೆಯಲ್ಲದೆ ಹಲವು ನಾಟಕಗಳು, ಕೀರ್ತನೆಗಳು, ಕಾದಂಬರಿಗಳನ್ನು ಬರೆದಿದ್ದಾರೆ’ ಎಂದರು.</p>.<p>ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ‘ಕರ್ನಾಟಕ ಏಕೀಕರಣ ಹೋರಾಟದ ಜಾಗೃತಿಗೆ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯು ಮೂಲ ಮಂತ್ರವಾಗಿ ಹೊಸ ಆಯಾಮ ನೀಡಿತು. ಈ ಗೀತೆಯ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ಆಚರಿಸಿ, ಎಲ್ಲ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಒಂದು ನಿಗದಿತ ದಿನ ಈ ಹಾಡನ್ನು ಹಾಡುವ ಮೂಲಕ ಗೌರವ ಸಲ್ಲಿಸಬೇಕು’ ಎಂದು ಹೇಳಿದರು.</p>.<p>ಹುಯಿಲಗೋಳ ನಾರಾಯಣರಾಯರ ಮೊಮ್ಮಗಳು ರಾಧಾ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಗಾಯಕ ಆನಂದ ಮಾದಲಗೆರೆ ಹಾಡಿದರು. ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಉಪಸ್ಥಿತರಿದ್ದರು. </p>.<p>ಕಾರ್ಯಕ್ರಮಕ್ಕೂ ಮೊದಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>