‘ಒಕ್ಕಲಿಗರು, ಲಿಂಗಾಯತರು ಸೇರಿ 44ಕ್ಕೂ ಹೆಚ್ಚು ಸಮುದಾಯಗಳು ಮೀಸಲಾತಿಗೆ ಹೋರಾಟ ನಡೆಸಿವೆ. ಈ ಸಮುದಾಯಗಳಲ್ಲಿ ಇರುವವರು ಬಹುತೇಕ ಕೃಷಿಕರು. ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದ ಕೃಷಿಕರು ಈಗ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ, ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ. ಈ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿದರೂ ಶೇ 4ರಷ್ಟು ಮಂದಿಗೆ ಮಾತ್ರವೇ ನೆರವಾಗಬಹುದು. ಉಳಿದವರ ಪರಿಸ್ಥಿತಿ ಬಗ್ಗೆಯೂ ಸರ್ಕಾರ ಯೋಚಿಸಬೇಕು’ ಎಂದು ಸಲಹೆ ನೀಡಿದರು.