ಸರ್ಕಾರದ ರೈತವಿರೋಧಿ ಧೋರಣೆ ಖಂಡಿಸಿ, ಹೋರಾಟಕ್ಕೆ ಇಳಿದಿರುವಐಕ್ಯ ಹೋರಾಟ ಸಮಿತಿ ಕರೆಗೆ ಕಬಿನಿ ರೈತ ಹಿತರಕ್ಷಣಾ ಸಮಿತಿ, ರಾಜ್ಯ ಕೃಷಿ ಪಂಪ್ಸೆಟ್ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಓಲಾ ಮತ್ತು ಊಬರ್ ಆಟೊ ಚಾಲಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ, ಸಮುದಾಯ ಕರ್ನಾಟಕ, ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಸೇರಿದಂತೆ ಸುಮಾರು 108 ಕ್ಕೂ ಅಧಿಕ ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ.