ನಿಗಮಕ್ಕೆ ₹ 100 ಕೋಟಿ ಅನುದಾನ ಒದಗಿಸಲಾಗಿದೆ. ಇದೇ 19ರಂದು ನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾ
ರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮರಾಠ ಅಭಿವೃದ್ಧಿ ನಿಗಮವನ್ನು ಉದ್ಘಾಟಿಸುವರು. ಬೆಂಗಳೂರಿನ ಗವಿಪುರದ ಭವಾನಿ ದತ್ತ ಪೀಠದ ಗೋಸಾಯಿ ಮಠದ ವೇದಾಂತಾಚಾರ್ಯ, ಮಂಜುನಾಥ ಭಾರತಿ ಸ್ವಾಮೀಜಿ, ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ, ಹಿಂದುಳಿದ ವರ್ಗಗಳ ಅಭಿವೃದ್ಧಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉನ್ನತ ಶಿಕ್ಷಣ
ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಭಾಗವಹಿಸುವರು ಎಂದು ಮುಳೆ ತಿಳಿಸಿದರು.