<p><strong>ಕೆ.ಆರ್.ಪುರ</strong>: ಸಮಾನತೆ, ಏಕತೆ, ಯುವಶಕ್ತಿ, ಸಾಮಾಜಿಕ ನ್ಯಾಯದ ಮೌಲ್ಯಗಳ ಜಾಗೃತಿಗಾಗಿ ವೈಚಾರಿಕ ಪ್ರಗತಿಪರ ವೇದಿಕೆ (ಕರ್ನಾಟಕ) ಬೆಳತ್ತೂರಿನಲ್ಲಿ ಹಮ್ಮಿಕೊಂಡಿದ್ದ ‘ಹಕ್ಕುಗಳಿಗಾಗಿ ಓಟ’ ಮ್ಯಾರಥಾನ್ನಲ್ಲಿ ನೂರಾರು ಜನ ಪಾಲ್ಗೊಂಡಿದ್ದರು.</p>.<p>5 ಕಿ.ಮೀ. ಹಾಗೂ 10 ಕಿ.ಮೀ. ಮ್ಯಾರಥಾನ್ಗೆ ಬಾಕ್ಸಿಂಗ್ ಕ್ರೀಡಾಪಟು ಎಂ. ವೇಣು ಅವರು ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಯುವ ಪೀಳಿಗೆ ಆರೋಗ್ಯ ಕಾಪಾಡುವುದರ ಜೊತೆಗೆ ನಮ್ಮ ಹಕ್ಕುಗಳನ್ನು ರಕ್ಷಿಸಲು ಹೋರಾಟ ಮಾಡಬೇಕು. ದೇಶದ ಏಕತೆಯ ದೃಷ್ಟಿಯಿಂದ ನಾವೆಲ್ಲರೂ ಒಂದಾಗಬೇಕು’ ಎಂದು ಕರೆ ನೀಡಿದರು. </p>.<p>ವೈಚಾರಿಕ ಪ್ರಗತಿಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಈ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು. 5 ಹಾಗೂ 10 ಕಿ.ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ ₹25 ಸಾವಿರ ನಗದು ಬಹುಮಾನವನ್ನು ಬರುವ ಮೇ 31ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. </p>.<p>ಪದಾಧಿಕಾರಿಗಳಾದ ಎಂ.ಆರ್. ವೆಂಕಟೇಶ್, ಚಿನ್ನಸ್ವಾಮಿ, ಅಸಿಫ್, ವಿಜಯನ್, ಬೆಳತ್ತೂರು ರಮೇಶ್, ಮಹೇಂದ್ರ, ಕೆ. ಗಂಗಾಧರ್, ಮಾಸ್ತಿ ಜಗನ್ನಾಥ್, ಕಾಂಚನಾ, ಆದೂರು ಮುನಿರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ</strong>: ಸಮಾನತೆ, ಏಕತೆ, ಯುವಶಕ್ತಿ, ಸಾಮಾಜಿಕ ನ್ಯಾಯದ ಮೌಲ್ಯಗಳ ಜಾಗೃತಿಗಾಗಿ ವೈಚಾರಿಕ ಪ್ರಗತಿಪರ ವೇದಿಕೆ (ಕರ್ನಾಟಕ) ಬೆಳತ್ತೂರಿನಲ್ಲಿ ಹಮ್ಮಿಕೊಂಡಿದ್ದ ‘ಹಕ್ಕುಗಳಿಗಾಗಿ ಓಟ’ ಮ್ಯಾರಥಾನ್ನಲ್ಲಿ ನೂರಾರು ಜನ ಪಾಲ್ಗೊಂಡಿದ್ದರು.</p>.<p>5 ಕಿ.ಮೀ. ಹಾಗೂ 10 ಕಿ.ಮೀ. ಮ್ಯಾರಥಾನ್ಗೆ ಬಾಕ್ಸಿಂಗ್ ಕ್ರೀಡಾಪಟು ಎಂ. ವೇಣು ಅವರು ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಯುವ ಪೀಳಿಗೆ ಆರೋಗ್ಯ ಕಾಪಾಡುವುದರ ಜೊತೆಗೆ ನಮ್ಮ ಹಕ್ಕುಗಳನ್ನು ರಕ್ಷಿಸಲು ಹೋರಾಟ ಮಾಡಬೇಕು. ದೇಶದ ಏಕತೆಯ ದೃಷ್ಟಿಯಿಂದ ನಾವೆಲ್ಲರೂ ಒಂದಾಗಬೇಕು’ ಎಂದು ಕರೆ ನೀಡಿದರು. </p>.<p>ವೈಚಾರಿಕ ಪ್ರಗತಿಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಈ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು. 5 ಹಾಗೂ 10 ಕಿ.ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ ₹25 ಸಾವಿರ ನಗದು ಬಹುಮಾನವನ್ನು ಬರುವ ಮೇ 31ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. </p>.<p>ಪದಾಧಿಕಾರಿಗಳಾದ ಎಂ.ಆರ್. ವೆಂಕಟೇಶ್, ಚಿನ್ನಸ್ವಾಮಿ, ಅಸಿಫ್, ವಿಜಯನ್, ಬೆಳತ್ತೂರು ರಮೇಶ್, ಮಹೇಂದ್ರ, ಕೆ. ಗಂಗಾಧರ್, ಮಾಸ್ತಿ ಜಗನ್ನಾಥ್, ಕಾಂಚನಾ, ಆದೂರು ಮುನಿರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>