<p><strong>ಬೆಂಗಳೂರು</strong>: ರಸ್ತೆ ಸುರಕ್ಷತೆಗಾಗಿ ಜನಜಾಗೃತಿ ಮೂಡಿಸಲು ಮಾರ್ಚ್ 7ರಂದು ನಗರದಲ್ಲಿ ‘5ಕೆ ಸೇಫ್-ಎ-ಥಾನ್’ ಕಾರ್ಯಕ್ರಮವನ್ನು ಸಾರಿಗೆ ಇಲಾಖೆ ಆಯೋಜಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪೊಲೀಸ್ ಇಲಾಖೆ ಹಾಗೂ ಕ್ರೀಡೆ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ‘ನಮ್ಮ ರಸ್ತೆ - ನಮ್ಮ ಸುರಕ್ಷತೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ದೇಶದಲ್ಲಿ ವರ್ಷಕ್ಕೆ 1.70 ಲಕ್ಷ ಜನರು ಅಪಘಾತದಿಂದ ಮೃತರಾಗುತ್ತಿದ್ದಾರೆ. 4.70 ಲಕ್ಷ ಜನರು ಗಾಯಗೊಂಡು ಅಂಗವಿಕಲರಾಗುತ್ತಿದ್ದಾರೆ. ರಾಜ್ಯದಲ್ಲಿ ವರ್ಷಕ್ಕೆ ಅಪಘಾತದಲ್ಲಿ 11 ಸಾವಿರ ಜನರು ಸಾವಿಗೀಡಾಗುತ್ತಿದ್ದು, 25 ಸಾವಿರ ಜನರು ಅಂಗವೈಕಲ್ಯ ಹೊಂದುತ್ತಿದ್ದಾರೆ ಎಂದು ವಿವರಿಸಿದರು.</p>.<p>ಅತಿವೇಗ, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಜಾಗರೂಕತೆಯಿಂದಾಗಿ ಅಪಘಾತಗಳು ಉಂಟಾಗುತ್ತಿವೆ. ಚಾಲಕರು ಜಾಗೃತಗೊಂಡರಷ್ಟೇ ಅಪಘಾತ ಕಡಿಮೆ ಮಾಡಲು ಸಾಧ್ಯ. ರಾಜ್ಯದಲ್ಲಿ 747 ‘ಬ್ಲ್ಯಾಕ್ ಸ್ಪಾಟ್’ಗಳನ್ನು ಗುರುತಿಸಲಾಗಿದ್ದು, ಅಪಘಾತ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಮಾರ್ಚ್ 7ರಂದು ಬೆಳಿಗ್ಗೆ 6ರಿಂದ 9 ಗಂಟೆವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ‘ಸೇಫ್ ಎ ಥಾನ್’ ನಡೆಯಲಿದೆ. ನಡಿಗೆ, ಸೈಕ್ಲಿಂಗ್ ಅಥವಾ ಓಟದ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಂಡು ಸುರಕ್ಷಿತ ಸಂಚಾರದ ಬಗ್ಗೆ ಪ್ರತಿಜ್ಞೆ ಮಾಡಬಹುದು. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತರು www.saferoadskarnataka.com ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಾರಿಗೆ ಆಯುಕ್ತ ಎ.ಎಂ. ಯೋಗೀಶ್, ಹೆಚ್ಚುವರಿ ಆಯುಕ್ತರಾದ ಸಿ. ಮಲ್ಲಿಕಾರ್ಜುನ, ಬಿ.ಪಿ. ಉಮಾಶಂಕರ್, ಎಂ.ಪಿ. ಓಂಕಾರೇಶ್ವರಿ, ಪುರುಷೋತ್ತಮ, ಕಾವೇರಿ ಆಸ್ಪತ್ರೆ ಮುಖ್ಯಸ್ಥ ಡಾ. ವಿಜಯಭಾಸ್ಕರನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆ ಸುರಕ್ಷತೆಗಾಗಿ ಜನಜಾಗೃತಿ ಮೂಡಿಸಲು ಮಾರ್ಚ್ 7ರಂದು ನಗರದಲ್ಲಿ ‘5ಕೆ ಸೇಫ್-ಎ-ಥಾನ್’ ಕಾರ್ಯಕ್ರಮವನ್ನು ಸಾರಿಗೆ ಇಲಾಖೆ ಆಯೋಜಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪೊಲೀಸ್ ಇಲಾಖೆ ಹಾಗೂ ಕ್ರೀಡೆ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ‘ನಮ್ಮ ರಸ್ತೆ - ನಮ್ಮ ಸುರಕ್ಷತೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ದೇಶದಲ್ಲಿ ವರ್ಷಕ್ಕೆ 1.70 ಲಕ್ಷ ಜನರು ಅಪಘಾತದಿಂದ ಮೃತರಾಗುತ್ತಿದ್ದಾರೆ. 4.70 ಲಕ್ಷ ಜನರು ಗಾಯಗೊಂಡು ಅಂಗವಿಕಲರಾಗುತ್ತಿದ್ದಾರೆ. ರಾಜ್ಯದಲ್ಲಿ ವರ್ಷಕ್ಕೆ ಅಪಘಾತದಲ್ಲಿ 11 ಸಾವಿರ ಜನರು ಸಾವಿಗೀಡಾಗುತ್ತಿದ್ದು, 25 ಸಾವಿರ ಜನರು ಅಂಗವೈಕಲ್ಯ ಹೊಂದುತ್ತಿದ್ದಾರೆ ಎಂದು ವಿವರಿಸಿದರು.</p>.<p>ಅತಿವೇಗ, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಜಾಗರೂಕತೆಯಿಂದಾಗಿ ಅಪಘಾತಗಳು ಉಂಟಾಗುತ್ತಿವೆ. ಚಾಲಕರು ಜಾಗೃತಗೊಂಡರಷ್ಟೇ ಅಪಘಾತ ಕಡಿಮೆ ಮಾಡಲು ಸಾಧ್ಯ. ರಾಜ್ಯದಲ್ಲಿ 747 ‘ಬ್ಲ್ಯಾಕ್ ಸ್ಪಾಟ್’ಗಳನ್ನು ಗುರುತಿಸಲಾಗಿದ್ದು, ಅಪಘಾತ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಮಾರ್ಚ್ 7ರಂದು ಬೆಳಿಗ್ಗೆ 6ರಿಂದ 9 ಗಂಟೆವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ‘ಸೇಫ್ ಎ ಥಾನ್’ ನಡೆಯಲಿದೆ. ನಡಿಗೆ, ಸೈಕ್ಲಿಂಗ್ ಅಥವಾ ಓಟದ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಂಡು ಸುರಕ್ಷಿತ ಸಂಚಾರದ ಬಗ್ಗೆ ಪ್ರತಿಜ್ಞೆ ಮಾಡಬಹುದು. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತರು www.saferoadskarnataka.com ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಾರಿಗೆ ಆಯುಕ್ತ ಎ.ಎಂ. ಯೋಗೀಶ್, ಹೆಚ್ಚುವರಿ ಆಯುಕ್ತರಾದ ಸಿ. ಮಲ್ಲಿಕಾರ್ಜುನ, ಬಿ.ಪಿ. ಉಮಾಶಂಕರ್, ಎಂ.ಪಿ. ಓಂಕಾರೇಶ್ವರಿ, ಪುರುಷೋತ್ತಮ, ಕಾವೇರಿ ಆಸ್ಪತ್ರೆ ಮುಖ್ಯಸ್ಥ ಡಾ. ವಿಜಯಭಾಸ್ಕರನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>