ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನಿನ ಬಾಕ್ಸ್‌ನಲ್ಲಿ ಗಾಂಜಾ ಸಾಗಾಟ: ಮೂವರು ಬಂಧನ

Last Updated 4 ಜುಲೈ 2021, 21:23 IST
ಅಕ್ಷರ ಗಾತ್ರ

ಬೆಂಗಳೂರು: ಮೀನಿನ ಬಾಕ್ಸ್‌ಗಳಲ್ಲಿ ಗಾಂಜಾ ಸಾಗಾಟ ಹಾಗೂ ಮಾರುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಒಡಿಶಾದ ದಿವಾಕರ್, ಬೆಂಗಳೂರಿನ ಸುದರ್ಶನ್ ಹಾಗೂ ವಿಶ್ವನಾಥ್ ಬಂಧಿತ ಆರೋಪಿಗಳು.

‘ಒಡಿಶಾದ ಕೆಲ ಭಾಗಗಳಲ್ಲಿ ಬೆಳೆಯುವ ಗಾಂಜಾವನ್ನುದಿವಾಕರ್‌ ಬೆಂಗಳೂರಿಗೆ ಪೂರೈಕೆ ಮಾಡುತ್ತಿದ್ದ.ಅವುಗಳನ್ನು ಲಾರಿ, ಬಸ್ಸು ಹಾಗೂ ರೈಲಿನಲ್ಲಿ ಬೆಂಗಳೂರಿಗೆ ತರಲಾಗುತ್ತಿತ್ತು. ಬಳಿಕ ಸುದರ್ಶನ್ ಮುಖಾಂತರವಾಗಿ ವಿಶ್ವನಾಥ್‌ ಗಾಂಜಾ ಮಾರಾಟ ಮಾಡಿ, ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.

‘ಇವರು ನಗರದ ಪ್ರತಿಷ್ಠಿತ ಕಾಲೇಜುಗಳು, ಕಾರ್ಖಾನೆಗಳು ಹಾಗೂ ಡಾಬಾಗಳ ಬಳಿ ತೆರಳಿ, ಗಿರಾಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ನಡೆಸಿದ ದಾಳಿಯ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 11 ಕೆ.ಜಿ ಗಾಂಜಾ ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT