<p>ಬೆಂಗಳೂರು: ವೈವಾಹಿಕ ಅತ್ಯಾಚಾರ ಕಾನೂನು ಜಾರಿಗೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪಿಐಎಲ್ ಅನ್ನು ವಜಾಗೊಳಿಸಲು ಆಗ್ರಹಿಸಿ, ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್ನ ಪುರುಷ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ<br />ನಡೆಸಿದರು.</p>.<p>ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿರುದ್ಧ ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹ ನಡೆದಿದ್ದು, ಅದರ ಅಂಗವಾಗಿ ನಗರದಲ್ಲೂ ಪ್ರತಿಭಟನೆ ನಡೆಯಿತು.</p>.<p>‘ಈ ಕಾನೂನು ಜಾರಿಯಾದರೆ ಪತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಅಮಾಯಕರು ಜೈಲು ಪಾಲಾಗುತ್ತಾರೆ. ಉದ್ಯೋಗ, ಆಸ್ತಿ ಹಾಗೂ ಸಾಮಾಜಿಕ ಖ್ಯಾತಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಪುರುಷರು ಆಘಾತಕ್ಕೂ ಒಳಗಾಗಲಿದ್ದಾರೆ’ ಎಂದು ಪ್ರತಿಭಟನಕಾರರು ಹೇಳಿದರು.</p>.<p>ವೈವಾಹಿಕ ಅತ್ಯಾಚಾರ ಕಾನೂನಿನ ಮೇಲಿನ ಪಿಐಎಲ್ ವಜಾಗೊಳಿಸಬೇಕು. ಮದುವೆಯಲ್ಲಿ ಲೈಂಗಿಕ ದೌರ್ಜನ್ಯದ ವಿಷಯವನ್ನು ಸಂಸತ್ತು ಪರಿಶೀಲಿಸಬಹುದು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷ ಸಂತ್ರ<br />ಸ್ತರಿಗೆ ನ್ಯಾಯಾಲಯದಿಂದ ರಕ್ಷಣೆ ನೀಡಬೇಕು. ತನಿಖೆಯ ಸಮಯದಲ್ಲಿ ಪೊಲೀಸ್ ಠಾಣೆಗಳಲ್ಲಿ ಸುಳ್ಳು ಆರೋಪಗಳನ್ನು ಪರಿಶೀಲಿ<br />ಸಬೇಕು. ಪ್ರತಿ ಪೊಲೀಸ್ ಠಾಣೆ<br />ಯಲ್ಲಿ ಸುಳ್ಳು ಪ್ರಕರಣಗಳ ಮುಕ್ತಾ<br />ಯದ ಅಂಕಿಅಂಶ ಪ್ರಕಟಿಸ<br />ಬೇಕು ಮತ್ತು ವಾರ್ಷಿಕ ಲೆಕ್ಕಪರಿಶೋಧನೆ ನಡೆಸಬೇಕು ಎಂದು<br />ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಅನಿಲ್ಕುಮಾರ್, ಸುಜಿತ್, ಶಿವಪ್ರಕಾಶ್, ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವೈವಾಹಿಕ ಅತ್ಯಾಚಾರ ಕಾನೂನು ಜಾರಿಗೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪಿಐಎಲ್ ಅನ್ನು ವಜಾಗೊಳಿಸಲು ಆಗ್ರಹಿಸಿ, ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್ನ ಪುರುಷ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ<br />ನಡೆಸಿದರು.</p>.<p>ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿರುದ್ಧ ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹ ನಡೆದಿದ್ದು, ಅದರ ಅಂಗವಾಗಿ ನಗರದಲ್ಲೂ ಪ್ರತಿಭಟನೆ ನಡೆಯಿತು.</p>.<p>‘ಈ ಕಾನೂನು ಜಾರಿಯಾದರೆ ಪತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ. ಅಮಾಯಕರು ಜೈಲು ಪಾಲಾಗುತ್ತಾರೆ. ಉದ್ಯೋಗ, ಆಸ್ತಿ ಹಾಗೂ ಸಾಮಾಜಿಕ ಖ್ಯಾತಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಪುರುಷರು ಆಘಾತಕ್ಕೂ ಒಳಗಾಗಲಿದ್ದಾರೆ’ ಎಂದು ಪ್ರತಿಭಟನಕಾರರು ಹೇಳಿದರು.</p>.<p>ವೈವಾಹಿಕ ಅತ್ಯಾಚಾರ ಕಾನೂನಿನ ಮೇಲಿನ ಪಿಐಎಲ್ ವಜಾಗೊಳಿಸಬೇಕು. ಮದುವೆಯಲ್ಲಿ ಲೈಂಗಿಕ ದೌರ್ಜನ್ಯದ ವಿಷಯವನ್ನು ಸಂಸತ್ತು ಪರಿಶೀಲಿಸಬಹುದು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷ ಸಂತ್ರ<br />ಸ್ತರಿಗೆ ನ್ಯಾಯಾಲಯದಿಂದ ರಕ್ಷಣೆ ನೀಡಬೇಕು. ತನಿಖೆಯ ಸಮಯದಲ್ಲಿ ಪೊಲೀಸ್ ಠಾಣೆಗಳಲ್ಲಿ ಸುಳ್ಳು ಆರೋಪಗಳನ್ನು ಪರಿಶೀಲಿ<br />ಸಬೇಕು. ಪ್ರತಿ ಪೊಲೀಸ್ ಠಾಣೆ<br />ಯಲ್ಲಿ ಸುಳ್ಳು ಪ್ರಕರಣಗಳ ಮುಕ್ತಾ<br />ಯದ ಅಂಕಿಅಂಶ ಪ್ರಕಟಿಸ<br />ಬೇಕು ಮತ್ತು ವಾರ್ಷಿಕ ಲೆಕ್ಕಪರಿಶೋಧನೆ ನಡೆಸಬೇಕು ಎಂದು<br />ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಅನಿಲ್ಕುಮಾರ್, ಸುಜಿತ್, ಶಿವಪ್ರಕಾಶ್, ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>