<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದ ನಾಲ್ಕು ವ್ಯಾಪಾರ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬಿಬಿಎಂಪಿ ಆದೇಶಿಸಿದೆ.</p>.<p>ಕೆ.ಆರ್.ಮಾರುಕಟ್ಟೆಯ ಹೂವಿನ ಮಾರುಕಟ್ಟೆಯಲ್ಲಿ ಹರಾಜಿನಲ್ಲಿ (ಬೆಳಿಗ್ಗೆ 3ರಿಂದ 6 ಗಂಟೆ ತನಕ) ಪಾಲ್ಗೊಳ್ಳುವ ಮಾರಾಟಗಾರರು (ಮಳಿಗೆದಾರರನ್ನು ಹೊರತುಪಡಿಸಿ) ಬಿನ್ನಿಪೇಟೆಯ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರ ಆಗಬೇಕು ಎಂದು ಆದೇಶದಲ್ಲಿ ತಿಳಿಸಿದೆ.</p>.<p>ಕೆ.ಆರ್.ಮಾರುಕಟ್ಟೆಯಲ್ಲಿ ತರಕಾರಿ ಮತ್ತು ಹಣ್ಣು ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಎನ್.ಟಿ. ಪೇಟೆ ಮುಖ್ಯರಸ್ತೆ, ಗುಂಡಪ್ಪರಸ್ತೆ, ಅವೆನ್ಯೂ ಮುಖ್ಯರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳು ಗಾಡಿಯಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಿದೆ.</p>.<p>ಕಲಾಸಿಪಾಳ್ಯದ ಜಯಚಾಮರಾಜೇಂದ್ರ ಸಗಟು ತರಕಾರಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಸಿಲ್ವರ್ ಜ್ಯೂಬಿಲಿ ಪಾರ್ಕ್ ರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳುಗಾಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ತಿಳಿಸಿದೆ. ಕಲಾಸಿಪಾಳ್ಯದ ಸಗಟು ತರಕಾರಿ ಮಾರುಕಟ್ಟೆಯಲ್ಲಿನ ವ್ಯಾಪಾರ ಸಮಯವನ್ನು ಬೆಳಿಗ್ಗೆ 3 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಸೀಮಿತಗೊಳಿಸಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದ ನಾಲ್ಕು ವ್ಯಾಪಾರ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬಿಬಿಎಂಪಿ ಆದೇಶಿಸಿದೆ.</p>.<p>ಕೆ.ಆರ್.ಮಾರುಕಟ್ಟೆಯ ಹೂವಿನ ಮಾರುಕಟ್ಟೆಯಲ್ಲಿ ಹರಾಜಿನಲ್ಲಿ (ಬೆಳಿಗ್ಗೆ 3ರಿಂದ 6 ಗಂಟೆ ತನಕ) ಪಾಲ್ಗೊಳ್ಳುವ ಮಾರಾಟಗಾರರು (ಮಳಿಗೆದಾರರನ್ನು ಹೊರತುಪಡಿಸಿ) ಬಿನ್ನಿಪೇಟೆಯ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರ ಆಗಬೇಕು ಎಂದು ಆದೇಶದಲ್ಲಿ ತಿಳಿಸಿದೆ.</p>.<p>ಕೆ.ಆರ್.ಮಾರುಕಟ್ಟೆಯಲ್ಲಿ ತರಕಾರಿ ಮತ್ತು ಹಣ್ಣು ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಎನ್.ಟಿ. ಪೇಟೆ ಮುಖ್ಯರಸ್ತೆ, ಗುಂಡಪ್ಪರಸ್ತೆ, ಅವೆನ್ಯೂ ಮುಖ್ಯರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳು ಗಾಡಿಯಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಿದೆ.</p>.<p>ಕಲಾಸಿಪಾಳ್ಯದ ಜಯಚಾಮರಾಜೇಂದ್ರ ಸಗಟು ತರಕಾರಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಸಿಲ್ವರ್ ಜ್ಯೂಬಿಲಿ ಪಾರ್ಕ್ ರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳುಗಾಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ತಿಳಿಸಿದೆ. ಕಲಾಸಿಪಾಳ್ಯದ ಸಗಟು ತರಕಾರಿ ಮಾರುಕಟ್ಟೆಯಲ್ಲಿನ ವ್ಯಾಪಾರ ಸಮಯವನ್ನು ಬೆಳಿಗ್ಗೆ 3 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಸೀಮಿತಗೊಳಿಸಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>