‘ವಿಶ್ವವಿದ್ಯಾಲಯಗಳಲ್ಲಿನ ಪರೀಕ್ಷಾ ವ್ಯವಸ್ಥೆಯನ್ನೇ ಪುನರ್ ರೂಪಿಸಬೇಕಾದ ಅಗತ್ಯವನ್ನು ಈ ಹಗರಣ ಎತ್ತಿ ತೋರಿಸಿದೆ. ಹೊರಗುತ್ತಿಗೆ ಏಜೆನ್ಸಿಗಳು, ತಪ್ಪು ಮಾಡಿರುವ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.