<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 804 ಉತ್ತರ ಪತ್ರಿಕೆಗಳ ಅಂಕಗಳನ್ನು ತಿದ್ದಿರುವ ಹಗರಣವನ್ನು ಖಂಡಿಸಿರುವ ಸರ್ಕಾರದ ಶೈಕ್ಷಣಿಕ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಪ್ರಜಾವಾಣಿ'ಯಲ್ಲಿ ಜ.5ರಂದು<a href="https://www.prajavani.net/district/bengaluru-city/bangalore-university-marks-tampering-scam-computer-scanning-agency-793495.html" target="_blank"> ‘804 ಉತ್ತರಪತ್ರಿಕೆಗಳ ಅಂಕ ತಿದ್ದಿದರು’</a> ಶೀರ್ಷಿಕೆಯಡಿ ಪ್ರಕಟವಾದ ವರದಿ ನೋಡಿ ಪ್ರತಿಕ್ರಿಯಿಸಿರುವ ಅವರು, ‘ಶೈಕ್ಷಣಿಕ ಚಟುವಟಿಕೆಗಳನ್ನು ದಕ್ಷತೆಯಿಂದ, ಉತ್ತಮವಾಗಿ ವಿಶ್ವವಿದ್ಯಾಲಯಗಳು ನಿರ್ವಹಿಸಬೇಕು ಎಂದು ಸಮಾಜ ಬಯಸುತ್ತದೆ. ವಿಶ್ವವಿದ್ಯಾಲಯದಲ್ಲಿಯೇ ಇಂತಹ ಹಗರಣಗಳು ನಡೆಯುತ್ತಿವೆ. ಸ್ಕ್ಯಾನಿಂಗ್ ಏಜೆನ್ಸಿ, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಸಿಬ್ಬಂದಿಯೇ ಈ ಅಕ್ರಮ ನಡೆಸಿರುವುದು ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿನ ಪರೀಕ್ಷಾ ವ್ಯವಸ್ಥೆಯನ್ನೇ ಪುನರ್ ರೂಪಿಸಬೇಕಾದ ಅಗತ್ಯವನ್ನು ಈ ಹಗರಣ ಎತ್ತಿ ತೋರಿಸಿದೆ. ಹೊರಗುತ್ತಿಗೆ ಏಜೆನ್ಸಿಗಳು, ತಪ್ಪು ಮಾಡಿರುವ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು’ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 804 ಉತ್ತರ ಪತ್ರಿಕೆಗಳ ಅಂಕಗಳನ್ನು ತಿದ್ದಿರುವ ಹಗರಣವನ್ನು ಖಂಡಿಸಿರುವ ಸರ್ಕಾರದ ಶೈಕ್ಷಣಿಕ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಪ್ರಜಾವಾಣಿ'ಯಲ್ಲಿ ಜ.5ರಂದು<a href="https://www.prajavani.net/district/bengaluru-city/bangalore-university-marks-tampering-scam-computer-scanning-agency-793495.html" target="_blank"> ‘804 ಉತ್ತರಪತ್ರಿಕೆಗಳ ಅಂಕ ತಿದ್ದಿದರು’</a> ಶೀರ್ಷಿಕೆಯಡಿ ಪ್ರಕಟವಾದ ವರದಿ ನೋಡಿ ಪ್ರತಿಕ್ರಿಯಿಸಿರುವ ಅವರು, ‘ಶೈಕ್ಷಣಿಕ ಚಟುವಟಿಕೆಗಳನ್ನು ದಕ್ಷತೆಯಿಂದ, ಉತ್ತಮವಾಗಿ ವಿಶ್ವವಿದ್ಯಾಲಯಗಳು ನಿರ್ವಹಿಸಬೇಕು ಎಂದು ಸಮಾಜ ಬಯಸುತ್ತದೆ. ವಿಶ್ವವಿದ್ಯಾಲಯದಲ್ಲಿಯೇ ಇಂತಹ ಹಗರಣಗಳು ನಡೆಯುತ್ತಿವೆ. ಸ್ಕ್ಯಾನಿಂಗ್ ಏಜೆನ್ಸಿ, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಸಿಬ್ಬಂದಿಯೇ ಈ ಅಕ್ರಮ ನಡೆಸಿರುವುದು ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿನ ಪರೀಕ್ಷಾ ವ್ಯವಸ್ಥೆಯನ್ನೇ ಪುನರ್ ರೂಪಿಸಬೇಕಾದ ಅಗತ್ಯವನ್ನು ಈ ಹಗರಣ ಎತ್ತಿ ತೋರಿಸಿದೆ. ಹೊರಗುತ್ತಿಗೆ ಏಜೆನ್ಸಿಗಳು, ತಪ್ಪು ಮಾಡಿರುವ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು’ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>