<p><strong>ಬೆಂಗಳೂರು:</strong> ವೈವಾಹಿಕ ಜಾಲತಾಣ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ ಯುವತಿಯಿಂದ ₹ 2.07 ಲಕ್ಷ ಪಡೆದು ವಂಚಿಸಿದ್ದಾನೆ.</p>.<p>ನಗರದ ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿ ಆಗಿರುವ 30 ವರ್ಷದ ಯುವತಿ ವಂಚನೆ ಬಗ್ಗೆ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ವರನಿಗಾಗಿ ಹುಡುಕಾಟ ನಡೆಸುತ್ತಿದ್ದ ಯುವತಿ, ಬೆಂಗಾಲಿ ಶಾದಿ ಡಾಟ್ ಕಾಮ್ ಜಾಲತಾಣದಲ್ಲಿ ಖಾತೆ ತೆರೆದಿದ್ದರು. ಅಲ್ಲಿ ಆರೋಪಿ ಪರಿಚಯವಾಗಿತ್ತು. ವಿದೇಶದಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿದ್ದ ಆರೋಪಿ, ಚಾಟಿಂಗ್ ಮಾಡಲಾರಂಭಿಸಿದ್ದ. ಮದುವೆಯಾಗುವುದಾಗಿ ಹೇಳಿದ್ದ’ ಎಂದು ಮೂಲಗಳು ಹೇಳಿವೆ.</p>.<p>‘ಇತ್ತೀಚೆಗೆ ಯುವತಿಗೆ ಕರೆ ಮಾಡಿದ್ದ ಆರೋಪಿ, ‘ನನ್ನ ವೈಯಕ್ತಿಕ ಹಾಗೂ ಶೈಕ್ಷಣಿಕ ದಾಖಲೆಗಳು ದೆಹಲಿ ವಿಮಾನ ನಿಲ್ದಾಣದಲ್ಲಿವೆ. ನಾನು ದೆಹಲಿಗೆ ಬರಲು ಆಗುವುದಿಲ್ಲ. ನೀವೇ ಅವುಗಳನ್ನು ನಿಮ್ಮ ವಿಳಾಸಕ್ಕೆ ತರಿಸಿಕೊಂಡು ಇಟ್ಟುಕೊಳ್ಳಿ. ನಾನು ಬಂದಾಗ ತೆಗೆದುಕೊಂಡು ಹೋಗುತ್ತೇನೆ’ ಎಂದಿದ್ದ.’</p>.<p>‘ಕೆಲ ನಿಮಿಷಗಳ ನಂತರ ವಿಮಾನ ನಿಲ್ದಾಣ ಅಧಿಕಾರಿ ಸೋಗಿನಲ್ಲಿ ಯುವತಿಗೆ ಕರೆ ಮಾಡಿದ್ದ ಮತ್ತೊಬ್ಬ ಆರೋಪಿ, ‘ದಾಖಲೆಗಳನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಖಾತೆಗೆ ₹ 2.07 ಲಕ್ಷ ಹಾಕಿದ್ದರು. ಅದಾದ ನಂತರ ಆರೋಪಿಗಳು ನಾಪತ್ತೆಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈವಾಹಿಕ ಜಾಲತಾಣ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ ಯುವತಿಯಿಂದ ₹ 2.07 ಲಕ್ಷ ಪಡೆದು ವಂಚಿಸಿದ್ದಾನೆ.</p>.<p>ನಗರದ ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿ ಆಗಿರುವ 30 ವರ್ಷದ ಯುವತಿ ವಂಚನೆ ಬಗ್ಗೆ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ವರನಿಗಾಗಿ ಹುಡುಕಾಟ ನಡೆಸುತ್ತಿದ್ದ ಯುವತಿ, ಬೆಂಗಾಲಿ ಶಾದಿ ಡಾಟ್ ಕಾಮ್ ಜಾಲತಾಣದಲ್ಲಿ ಖಾತೆ ತೆರೆದಿದ್ದರು. ಅಲ್ಲಿ ಆರೋಪಿ ಪರಿಚಯವಾಗಿತ್ತು. ವಿದೇಶದಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿದ್ದ ಆರೋಪಿ, ಚಾಟಿಂಗ್ ಮಾಡಲಾರಂಭಿಸಿದ್ದ. ಮದುವೆಯಾಗುವುದಾಗಿ ಹೇಳಿದ್ದ’ ಎಂದು ಮೂಲಗಳು ಹೇಳಿವೆ.</p>.<p>‘ಇತ್ತೀಚೆಗೆ ಯುವತಿಗೆ ಕರೆ ಮಾಡಿದ್ದ ಆರೋಪಿ, ‘ನನ್ನ ವೈಯಕ್ತಿಕ ಹಾಗೂ ಶೈಕ್ಷಣಿಕ ದಾಖಲೆಗಳು ದೆಹಲಿ ವಿಮಾನ ನಿಲ್ದಾಣದಲ್ಲಿವೆ. ನಾನು ದೆಹಲಿಗೆ ಬರಲು ಆಗುವುದಿಲ್ಲ. ನೀವೇ ಅವುಗಳನ್ನು ನಿಮ್ಮ ವಿಳಾಸಕ್ಕೆ ತರಿಸಿಕೊಂಡು ಇಟ್ಟುಕೊಳ್ಳಿ. ನಾನು ಬಂದಾಗ ತೆಗೆದುಕೊಂಡು ಹೋಗುತ್ತೇನೆ’ ಎಂದಿದ್ದ.’</p>.<p>‘ಕೆಲ ನಿಮಿಷಗಳ ನಂತರ ವಿಮಾನ ನಿಲ್ದಾಣ ಅಧಿಕಾರಿ ಸೋಗಿನಲ್ಲಿ ಯುವತಿಗೆ ಕರೆ ಮಾಡಿದ್ದ ಮತ್ತೊಬ್ಬ ಆರೋಪಿ, ‘ದಾಖಲೆಗಳನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಖಾತೆಗೆ ₹ 2.07 ಲಕ್ಷ ಹಾಕಿದ್ದರು. ಅದಾದ ನಂತರ ಆರೋಪಿಗಳು ನಾಪತ್ತೆಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>