<p>ಬೆಂಗಳೂರು: ಪುಲಿಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರು ಮಾಲೀಕರೊಬ್ಬರು ಮಾಸ್ಕ್ ಧರಿಸದೇ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದು, ನೋಂದಣಿ ಸಂಖ್ಯೆ ಆಧರಿಸಿ ಮಾಲೀಕನ ವಿರುದ್ಧ ದೂರು ನೀಡಲಾಗಿದೆ.</p>.<p>ಠಾಣೆಯ ಎಎಸ್ಐ ನೇತೃತ್ವದ ತಂಡ, ವಾಹನಗಳನ್ನು ಪರಿಶೀಲನೆ ನಡೆಸುತ್ತಿತ್ತು. ಸ್ಥಳಕ್ಕೆ ಬಂದಿದ್ದ ಕಾರಿನಲ್ಲಿದ್ದ ಮಾಲೀಕ, ಮಾಸ್ಕ್ ಹಾಕಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಎಎಸ್ಐ, ದಂಡ ಕಟ್ಟುವಂತೆ ಹೇಳಿದ್ದರು.</p>.<p>ಅದಕ್ಕೆ ಒಪ್ಪದ ಮಾಲೀಕ, ರಸ್ತೆಯಲ್ಲೇ ಕಾರು ನಿಲ್ಲಿಸಿ ಲಾಕ್ ಮಾಡಿಕೊಂಡು ಓಡಾಡಿದ್ದರು. ಅದರಿಂದ ಸಾರ್ವಜನಿಕರ ವಾಹನಗಳ ಓಡಾಟಕ್ಕೂ ತೊಂದರೆಯಾಗಿ, ದಟ್ಟಣೆ ಉಂಟಾಯಿತು.</p>.<p>‘ನಾನು ಮಾಸ್ಕ್ ಹಾಕುವುದಿಲ್ಲ. ದಂಡವನ್ನೂ ಕಟ್ಟುವುದಿಲ್ಲ. ಏನಾದರೂ ಮಾಡಿಕೊ. ನಿನ್ನ ಬೆದರಿಕೆಗೂ ಹೆದರುವುದಿಲ್ಲ’ ಎಂದು ಮಾಲೀಕ, ಎಎಸ್ಐ ಅವರಿಗೆ ಅವಾಜ್ ಹಾಕಿ ಹೊರಟು ಹೋಗಿದ್ದಾನೆ, ಈ ಘಟನೆಯನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.</p>.<p>‘ಕರ್ತವ್ಯಕ್ಕೆ ಕಾರಿನ ಮಾಲೀಕ ಅಡ್ಡಿಪಡಿಸಿದ್ದಾನೆ. ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಮಾಲೀಕನ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಠಾಣೆಗೆ ದೂರು ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪುಲಿಕೇಶಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರು ಮಾಲೀಕರೊಬ್ಬರು ಮಾಸ್ಕ್ ಧರಿಸದೇ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದು, ನೋಂದಣಿ ಸಂಖ್ಯೆ ಆಧರಿಸಿ ಮಾಲೀಕನ ವಿರುದ್ಧ ದೂರು ನೀಡಲಾಗಿದೆ.</p>.<p>ಠಾಣೆಯ ಎಎಸ್ಐ ನೇತೃತ್ವದ ತಂಡ, ವಾಹನಗಳನ್ನು ಪರಿಶೀಲನೆ ನಡೆಸುತ್ತಿತ್ತು. ಸ್ಥಳಕ್ಕೆ ಬಂದಿದ್ದ ಕಾರಿನಲ್ಲಿದ್ದ ಮಾಲೀಕ, ಮಾಸ್ಕ್ ಹಾಕಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಎಎಸ್ಐ, ದಂಡ ಕಟ್ಟುವಂತೆ ಹೇಳಿದ್ದರು.</p>.<p>ಅದಕ್ಕೆ ಒಪ್ಪದ ಮಾಲೀಕ, ರಸ್ತೆಯಲ್ಲೇ ಕಾರು ನಿಲ್ಲಿಸಿ ಲಾಕ್ ಮಾಡಿಕೊಂಡು ಓಡಾಡಿದ್ದರು. ಅದರಿಂದ ಸಾರ್ವಜನಿಕರ ವಾಹನಗಳ ಓಡಾಟಕ್ಕೂ ತೊಂದರೆಯಾಗಿ, ದಟ್ಟಣೆ ಉಂಟಾಯಿತು.</p>.<p>‘ನಾನು ಮಾಸ್ಕ್ ಹಾಕುವುದಿಲ್ಲ. ದಂಡವನ್ನೂ ಕಟ್ಟುವುದಿಲ್ಲ. ಏನಾದರೂ ಮಾಡಿಕೊ. ನಿನ್ನ ಬೆದರಿಕೆಗೂ ಹೆದರುವುದಿಲ್ಲ’ ಎಂದು ಮಾಲೀಕ, ಎಎಸ್ಐ ಅವರಿಗೆ ಅವಾಜ್ ಹಾಕಿ ಹೊರಟು ಹೋಗಿದ್ದಾನೆ, ಈ ಘಟನೆಯನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.</p>.<p>‘ಕರ್ತವ್ಯಕ್ಕೆ ಕಾರಿನ ಮಾಲೀಕ ಅಡ್ಡಿಪಡಿಸಿದ್ದಾನೆ. ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಮಾಲೀಕನ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಠಾಣೆಗೆ ದೂರು ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>