<p><strong>ಬೆಂಗಳೂರು:</strong> ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಆರೋಗ್ಯ ಇಲಾಖೆಯು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಈ ಸಂಬಂಧ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಬಲವರ್ಧನೆ, ಉಪಕರಣಗಳ ಖರೀದಿ ಸೇರಿ ವಿವಿಧ ಕ್ರಮಗಳಿಗೆ ₹ 139 ಕೋಟಿ ಅನುದಾನ ಬಳಸಿಕೊಳ್ಳಲು ಅನುಮೋದನೆ ದೊರೆತಿದೆ.</p>.<p>ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಮುಖವಾಗಿದೆ. 2024–25ನೇ ಸಾಲಿನಲ್ಲಿ ರಾಜ್ಯದಲ್ಲಿ 9.31 ಲಕ್ಷ ಹೆರಿಗೆಗಳಾಗಿದ್ದು, 530 ತಾಯಂದಿರ ಮರಣ ಪ್ರಕರಣ ವರದಿಯಾಗಿದೆ. ಈ ಸಾವಿನ ನಿಖರ ಕಾರಣ ತಿಳಿಯಲು ಸಾವಿನ ಲೆಕ್ಕಗಳ ವರದಿ (ಡೆತ್ ಆಡಿಟ್) ಸಿದ್ಧಪಡಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. </p>.<p>ರಕ್ತಸ್ರಾವ, ಗರ್ಭಪಾತ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾರಣಗಳಿಂದ ತಾಯಂದಿರ ಮರಣ ವರದಿಯಾಗುತ್ತಿದ್ದು, ಶೇ 70 ರಷ್ಟು ಪ್ರಕರಣಗಳಲ್ಲಿ ಮರಣವನ್ನು ತಡೆಯಬಹುದಾಗಿದೆ. ಪ್ರಸವಪೂರ್ವ ಮತ್ತು ಪ್ರಸವ ನಂತರದ ಆರೈಕೆಯ ಗುಣಮಟ್ಟ ಸುಧಾರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.</p>.<p>ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಹಾಗೂ ಚಿಕಿತ್ಸೆ ನೀಡಲು ಅಗತ್ಯವಿರುವ ಉಪಕರಣಗಳ ಖರೀದಿ ಜತೆಗೆ, ಹಾಸಿಗೆಗಳ ಹೆಚ್ಚಳ, ಆಸ್ಪತ್ರೆಗಳ ಮೇಲ್ದರ್ಜೆಗೆ, ಮೇಲ್ವಿಚಾರಣೆ ಸೌಲಭ್ಯ, ವಿಶ್ರಾಂತಿ ಕೊಠಡಿ, ಸಹಾಯವಾಣಿ ಸೇರಿ ವಿವಿಧ ವ್ಯವಸ್ಥೆಗೆ ಅನುದಾನ ಹಂಚಿಕೆ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಆರೋಗ್ಯ ಇಲಾಖೆಯು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಈ ಸಂಬಂಧ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಬಲವರ್ಧನೆ, ಉಪಕರಣಗಳ ಖರೀದಿ ಸೇರಿ ವಿವಿಧ ಕ್ರಮಗಳಿಗೆ ₹ 139 ಕೋಟಿ ಅನುದಾನ ಬಳಸಿಕೊಳ್ಳಲು ಅನುಮೋದನೆ ದೊರೆತಿದೆ.</p>.<p>ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಮುಖವಾಗಿದೆ. 2024–25ನೇ ಸಾಲಿನಲ್ಲಿ ರಾಜ್ಯದಲ್ಲಿ 9.31 ಲಕ್ಷ ಹೆರಿಗೆಗಳಾಗಿದ್ದು, 530 ತಾಯಂದಿರ ಮರಣ ಪ್ರಕರಣ ವರದಿಯಾಗಿದೆ. ಈ ಸಾವಿನ ನಿಖರ ಕಾರಣ ತಿಳಿಯಲು ಸಾವಿನ ಲೆಕ್ಕಗಳ ವರದಿ (ಡೆತ್ ಆಡಿಟ್) ಸಿದ್ಧಪಡಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. </p>.<p>ರಕ್ತಸ್ರಾವ, ಗರ್ಭಪಾತ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾರಣಗಳಿಂದ ತಾಯಂದಿರ ಮರಣ ವರದಿಯಾಗುತ್ತಿದ್ದು, ಶೇ 70 ರಷ್ಟು ಪ್ರಕರಣಗಳಲ್ಲಿ ಮರಣವನ್ನು ತಡೆಯಬಹುದಾಗಿದೆ. ಪ್ರಸವಪೂರ್ವ ಮತ್ತು ಪ್ರಸವ ನಂತರದ ಆರೈಕೆಯ ಗುಣಮಟ್ಟ ಸುಧಾರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.</p>.<p>ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಹಾಗೂ ಚಿಕಿತ್ಸೆ ನೀಡಲು ಅಗತ್ಯವಿರುವ ಉಪಕರಣಗಳ ಖರೀದಿ ಜತೆಗೆ, ಹಾಸಿಗೆಗಳ ಹೆಚ್ಚಳ, ಆಸ್ಪತ್ರೆಗಳ ಮೇಲ್ದರ್ಜೆಗೆ, ಮೇಲ್ವಿಚಾರಣೆ ಸೌಲಭ್ಯ, ವಿಶ್ರಾಂತಿ ಕೊಠಡಿ, ಸಹಾಯವಾಣಿ ಸೇರಿ ವಿವಿಧ ವ್ಯವಸ್ಥೆಗೆ ಅನುದಾನ ಹಂಚಿಕೆ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>