ಪದ್ಮನಾಭ ರೆಡ್ಡಿ, ಮಂಜುನಾಥ ರಾಜು, ಎಲ್. ಶ್ರೀನಿವಾಸ್ ಹಾಗೂ ಮುನೀಂದ್ರ ಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಈ ನಾಲ್ವರ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ಸಚಿವರಾದ ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರನ್ನು ಒಳಗೊಂಡ ಉಪಸಮಿತಿ ರಚಿಸಲಾಯಿತು. ಸಮಿತಿಯು ಅಂತಿಮ ಸುತ್ತಿನ ಮಾತುಕತೆ ನಡೆಸಿದರೂ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.