ಬಿಜೆಪಿಯಲ್ಲಿ ಪದ್ಮನಾಭ ರೆಡ್ಡಿ, ಎಲ್.ಶ್ರೀನಿವಾಸ್, ಕೆ.ಎ.ಮುನೀಂದ್ರ ಕುಮಾರ್, ಜಿ.ಮಂಜುನಾಥ ರಾಜು, ಎಂ.ವೆಂಕಟೇಶ್, ಎಂ.ಗೌತಮ್ ಕುಮಾರ್, ಕೆ.ಉಮೇಶ ಶೆಟ್ಟಿ ಅವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ಸೋಮವಾರ ಮಧ್ಯರಾತ್ರಿವರೆಗೂ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಿದ್ದರು. ಅಂತಿಮವಾಗಿ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿದ್ದ ಗೌತಮ್ ಕುಮಾರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದರು.