‘ಕೆ.ಆರ್.ಮಾರುಕಟ್ಟೆ ಬಳಿ ನಡೆಯುತ್ತಿರುವ ಜಲಮಂಡಳಿಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಇರುವ ತೊಡಕುಗಳನ್ನು ನಿವಾರಿಸಲು ಜಲಮಂಡಳಿಯ ಮುಖ್ಯ ಎಂಜಿನಿಯರ್, ಬಿಬಿಎಂಪಿಯ ಪಶ್ಚಿಮ ವಲಯದ ಮುಖ್ಯ ಎಂಜಿನಿಯರ್ ಹಾಗೂ ಮಾರುಕಟ್ಟೆಗೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ತಪಾಸಣೆ ನಡೆಸಿ ಕ್ರಮಕೈಗೊಳ್ಳಬೇಕು’ ಎಂದು ಮೇಯರ್ ಸೂಚನೆ ನೀಡಿದರು.