ಅಭ್ಯರ್ಥಿ ಆಯ್ಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ದಂತೆ ಸಮಿತಿ ರಚಿಸಲಾಗಿತ್ತು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಈ ಸಮಿತಿಗೆ ಮಾನ್ಯತೆಯೇ ಇಲ್ಲ’ ಎಂದು ಹೇಳಿಕೆ ನೀಡಿದ್ದರು. ರಾಜ್ಯದಲ್ಲಿ ಪಕ್ಷದ ತೀರ್ಮಾನ ಅಂತಿಮವೇ ಹೊರತು, ಸರ್ಕಾರದ್ದಲ್ಲ ಎಂಬ ಸಂದೇಶವನ್ನೂ ಸಾರಿದ್ದರು.