<p><strong>ಬೆಂಗಳೂರು</strong>: ಬಿಯರ್ ಮತ್ತು ಇತರ ಪಾನೀಯ ತಯಾರಿಸುವ ಡೆನ್ಮಾರ್ಕ್ನ ಜಾಗತಿಕ ಕಂಪನಿ ಕಾರ್ಲ್ಸ್ಬರ್ಗ್ ಗ್ರೂಪ್, ರಾಜ್ಯದಲ್ಲಿ ₹350 ಕೋಟಿ ಬಂಡವಾಳ ಹೂಡಿಕೆಯ ಒಪ್ಪಂದದ ಪ್ರಗತಿಯನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪರಿಶೀಲಿಸಿದರು.</p>.<p>ಡೆನ್ಮಾರ್ಕ್ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಸಿಇಒ ಜಾಕೊಬ್ ಆರಪ್ ಆ್ಯಂಡರ್ಸನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>ಕಾರ್ಲ್ಸ್ಬರ್ಗ್ ಸೇರಿದಂತೆ ಕೆಕೆ ವಿಂಡ್ ಸೊಲುಷನ್ಸ್, ನೊವೊನೆಸಿಸ್, ನೊವೊ ನಾರ್ಡಿಸ್ಕ್, ಡೆನ್ಮಾರ್ಕ್ ಕೈಗಾರಿಕಾ ಒಕ್ಕೂಟ (ಡಿಐ) ಮತ್ತು ಭಾರತ ಹಾಗೂ ಡೆನ್ಮಾರ್ಕ್ ವಾಣಿಜ್ಯೋದ್ಯಮ ಸಂಘ (ಐಡಿಸಿಸಿ) ಜೊತೆ ಸಭೆ ನಡೆಸಿದರು.</p>.<p>ಔಷಧಿ ತಯಾರಿಕೆಯ ಜಾಗತಿಕ ಪ್ರಮುಖ ಕಂಪನಿ ನೊವೊ ನಾರ್ಡಿಸ್ಕ್ ಜೊತೆಗಿನ ಸಭೆಯಲ್ಲಿ ಸಚಿವ ಪಾಟೀಲ ಅವರು ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಕೋರಿದರು.</p>.<p>ವಾಣಿಜ್ಯ ಬಾಂಧವ್ಯ ವೃದ್ಧಿಸಲು ಬೆಂಗಳೂರಿನಲ್ಲಿ ಕಚೇರಿ ಆರಂಭಿಸಲು ಸಚಿವ ಪಾಟೀಲ ಅವರು ‘ಐಡಿಸಿಸಿ’ಗೆ ಆಹ್ವಾನ ನೀಡಿದರು. ರೋಡ್ಷೋನಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್, ಕೆಐಎಡಿಬಿ ಮುಖ್ಯ ಎಂಜಿನಿಯರ್ ವೀರಭದ್ರಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಯರ್ ಮತ್ತು ಇತರ ಪಾನೀಯ ತಯಾರಿಸುವ ಡೆನ್ಮಾರ್ಕ್ನ ಜಾಗತಿಕ ಕಂಪನಿ ಕಾರ್ಲ್ಸ್ಬರ್ಗ್ ಗ್ರೂಪ್, ರಾಜ್ಯದಲ್ಲಿ ₹350 ಕೋಟಿ ಬಂಡವಾಳ ಹೂಡಿಕೆಯ ಒಪ್ಪಂದದ ಪ್ರಗತಿಯನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪರಿಶೀಲಿಸಿದರು.</p>.<p>ಡೆನ್ಮಾರ್ಕ್ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಸಿಇಒ ಜಾಕೊಬ್ ಆರಪ್ ಆ್ಯಂಡರ್ಸನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<p>ಕಾರ್ಲ್ಸ್ಬರ್ಗ್ ಸೇರಿದಂತೆ ಕೆಕೆ ವಿಂಡ್ ಸೊಲುಷನ್ಸ್, ನೊವೊನೆಸಿಸ್, ನೊವೊ ನಾರ್ಡಿಸ್ಕ್, ಡೆನ್ಮಾರ್ಕ್ ಕೈಗಾರಿಕಾ ಒಕ್ಕೂಟ (ಡಿಐ) ಮತ್ತು ಭಾರತ ಹಾಗೂ ಡೆನ್ಮಾರ್ಕ್ ವಾಣಿಜ್ಯೋದ್ಯಮ ಸಂಘ (ಐಡಿಸಿಸಿ) ಜೊತೆ ಸಭೆ ನಡೆಸಿದರು.</p>.<p>ಔಷಧಿ ತಯಾರಿಕೆಯ ಜಾಗತಿಕ ಪ್ರಮುಖ ಕಂಪನಿ ನೊವೊ ನಾರ್ಡಿಸ್ಕ್ ಜೊತೆಗಿನ ಸಭೆಯಲ್ಲಿ ಸಚಿವ ಪಾಟೀಲ ಅವರು ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಕೋರಿದರು.</p>.<p>ವಾಣಿಜ್ಯ ಬಾಂಧವ್ಯ ವೃದ್ಧಿಸಲು ಬೆಂಗಳೂರಿನಲ್ಲಿ ಕಚೇರಿ ಆರಂಭಿಸಲು ಸಚಿವ ಪಾಟೀಲ ಅವರು ‘ಐಡಿಸಿಸಿ’ಗೆ ಆಹ್ವಾನ ನೀಡಿದರು. ರೋಡ್ಷೋನಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್, ಕೆಐಎಡಿಬಿ ಮುಖ್ಯ ಎಂಜಿನಿಯರ್ ವೀರಭದ್ರಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>