ಮಹದೇವ್ ಅವರು ಈ ಹುದ್ದೆಯಲ್ಲಿ ಇನ್ನೂ ಒಂದು ವರ್ಷ ಮುಂದುವರಿಯಲು ಪ್ರಯತ್ನ ನಡೆಸಿದ್ದರು. ತಮ್ಮ ಜನ್ಮ ದಿನಾಂಕ ದಾಖಲೆಗಳಲ್ಲಿ ತಪ್ಪಾಗಿದೆ. ಅದನ್ನು ವಂಶವೃಕ್ಷದ ಪ್ರಕಾರ ಸರಿಪಡಿಸಿ ಸೇವಾವಧಿಯನ್ನು ವಿಸ್ತರಣೆ ಮಾಡುವಂತೆ ಮಹದೇವ್ ಅವರು ಕೇಂದ್ರ ಆಡಳಿತ ನ್ಯಾಯ ಮಂಡಳಿಗೆ (ಸಿಎಟಿ) ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮಂಡಳಿ, ಅರ್ಜಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.