<p><strong>ಬೆಂಗಳೂರು: </strong>ಸಾರ್ವಜನಿಕರನ್ನು ಅಡ್ಡ ಗಟ್ಟಿ ಸುಲಿಗೆ ಮಾಡಿ ಪರಾರಿ ಯಾಗಿದ್ದ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಶ್ರೀಧರ್ (29) ಹಾಗೂ ನಿತಿನ್ ರಾಜ್ (18) ಬಂಧಿತರು. ಇನ್ನಿಬ್ಬರು ಬಾಲಕರಾಗಿದ್ದು, ಅವರನ್ನು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಶ್ರೀಧರ್, ಎಂಬಿಎ ಪದವೀಧರ. ಹಲವೆಡೆ ಸಾಲ ಮಾಡಿ, ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿದ್ದ. ಸಾಲಗಾರರ ಕಿರುಕುಳ ಹೆಚ್ಚಾಗುತ್ತಿದ್ದಂತೆ, ಮನೆ ತೊರೆದಿದ್ದ. ಸಹಚರರ ಜೊತೆ ಸೇರಿ ಸುಲಿಗೆ ಹಾಗೂ ಕಳ್ಳತನ ಎಸಗಲಾರಂಭಿಸಿದ್ದ’ ಎಂದೂ ತಿಳಿಸಿದರು.</p>.<p>‘ಬ್ಯಾಂಕ್ ಕಾಲೊನಿಯಲ್ಲಿ ಜೂನ್ 2ರಂದು ಲೋಕೇಶ್ ಎಂಬುವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಚಿನ್ನದ ಉಂಗುರ, ಸರ, ಪರ್ಸ್ನಲ್ಲಿದ್ದ ₹ 20 ಸಾವಿರ ನಗದು ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು’ ಎಂದೂ ಹೇಳಿದರು.</p>.<p class="Subhead">ಮಲೆ ಮಹದೇಶ್ವರ ದೇವಸ್ಥಾನಕ್ಕೆ ಹೋಗಿ ಪೂಜೆ: ‘ಕೃತ್ಯದ ಬಳಿಕ ಆರೋಪಿ ಗಳು, ಗೋವಾಗೆ ಹೋಗಿ ಕೆಲ ದಿನ ಮೋಜು–ಮಸ್ತಿ ಮಾಡಿದ್ದರು. ನಂತರ, ಪಶ್ಚಾತಾಪವಾಗಿ ಮಲೆಮಹದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಆರೋಪಿಗಳ ಬಗ್ಗೆ ಸುಳಿವು ಸಿಗುತ್ತಿದ್ದಂತೆ ವಿಶೇಷ ಕಾರ್ಯಾಚರಣೆ ನಡಸಿ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರ್ವಜನಿಕರನ್ನು ಅಡ್ಡ ಗಟ್ಟಿ ಸುಲಿಗೆ ಮಾಡಿ ಪರಾರಿ ಯಾಗಿದ್ದ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಶ್ರೀಧರ್ (29) ಹಾಗೂ ನಿತಿನ್ ರಾಜ್ (18) ಬಂಧಿತರು. ಇನ್ನಿಬ್ಬರು ಬಾಲಕರಾಗಿದ್ದು, ಅವರನ್ನು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಶ್ರೀಧರ್, ಎಂಬಿಎ ಪದವೀಧರ. ಹಲವೆಡೆ ಸಾಲ ಮಾಡಿ, ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿದ್ದ. ಸಾಲಗಾರರ ಕಿರುಕುಳ ಹೆಚ್ಚಾಗುತ್ತಿದ್ದಂತೆ, ಮನೆ ತೊರೆದಿದ್ದ. ಸಹಚರರ ಜೊತೆ ಸೇರಿ ಸುಲಿಗೆ ಹಾಗೂ ಕಳ್ಳತನ ಎಸಗಲಾರಂಭಿಸಿದ್ದ’ ಎಂದೂ ತಿಳಿಸಿದರು.</p>.<p>‘ಬ್ಯಾಂಕ್ ಕಾಲೊನಿಯಲ್ಲಿ ಜೂನ್ 2ರಂದು ಲೋಕೇಶ್ ಎಂಬುವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಚಿನ್ನದ ಉಂಗುರ, ಸರ, ಪರ್ಸ್ನಲ್ಲಿದ್ದ ₹ 20 ಸಾವಿರ ನಗದು ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು’ ಎಂದೂ ಹೇಳಿದರು.</p>.<p class="Subhead">ಮಲೆ ಮಹದೇಶ್ವರ ದೇವಸ್ಥಾನಕ್ಕೆ ಹೋಗಿ ಪೂಜೆ: ‘ಕೃತ್ಯದ ಬಳಿಕ ಆರೋಪಿ ಗಳು, ಗೋವಾಗೆ ಹೋಗಿ ಕೆಲ ದಿನ ಮೋಜು–ಮಸ್ತಿ ಮಾಡಿದ್ದರು. ನಂತರ, ಪಶ್ಚಾತಾಪವಾಗಿ ಮಲೆಮಹದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಆರೋಪಿಗಳ ಬಗ್ಗೆ ಸುಳಿವು ಸಿಗುತ್ತಿದ್ದಂತೆ ವಿಶೇಷ ಕಾರ್ಯಾಚರಣೆ ನಡಸಿ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>