‘ವಿಜ್ಞಾನಿಯ ಮಗಳು ದ್ವಿತೀಯ ಪಿಯು ಪೂರ್ಣಗೊಳಿಸಿ, ಎಂಬಿಬಿಎಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದಿದ್ದ ಆರೋಪಿ ಅರುಣ್ದಾಸ್, ಏಜೆನ್ಸಿಯೊಂದರ ಪ್ರತಿನಿಧಿ ಎಂಬುದಾಗಿ ಪರಿಚಯಿಸಿ ಕೊಂಡು ವಿಜ್ಞಾನಿಗೆ ಕರೆ ಮಾಡಿದ್ದ. ಮಗಳಿಗೆ ಬೆಂಗಳೂರಿನ ‘ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್’ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ಹೇಳಿದ್ದ’ ಎಂದು ಮೂಲಗಳು ಹೇಳಿವೆ.