<p><strong>ಬೆಂಗಳೂರು:</strong> ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್ವೊಂದರಲ್ಲಿ ರಿಪೇರಿ ಮಾಡುತ್ತಿದ್ದ ವೇಳೆ ಬಸ್ ಚಲಿಸಿದ ಪರಿಣಾಮ ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ವರ್ತೂರು ನಿವಾಸಿ ವಿಜಯ್ (35) ಮೃತ ಮೆಕ್ಯಾನಿಕ್. ಮತ್ತೊಬ್ಬ ಯುವಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ಶಾಲೆಯೊಂದರ ಬಸ್ ಕೆಟ್ಟಿತ್ತು. ಬಸ್ ಅನ್ನು ರಿಪೇರಿಗಾಗಿ ಗ್ಯಾರೇಜ್ಗೆ ಬಿಡಲಾಗಿತ್ತು. ಮಂಗಳವಾರ ಸಂಜೆ ವಿಜಯ್ ಮತ್ತು ಅವರ ಸಹಾಯಕ ರಿಪೇರಿ ಮಾಡುತ್ತಿದ್ದರು. ಬಸ್ ಕೆಳಭಾಗ ದಲ್ಲಿ ವಿಜಯ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ತನ್ನ ಸಹಾಯಕನಿಗೆ ಬಸ್ ಸ್ಟಾರ್ಟ್ ಮಾಡುವಂತೆ ಸೂಚಿಸಿದ್ದರು. ಬಸ್ ಸ್ಟಾರ್ಟ್ ಮಾಡುತ್ತಿದ್ದಂತೆಯೇ ಏಕಾಏಕಿ ಚಲಿಸಿದ್ದರಿಂದ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.</p><p>ಬಸ್ನಲ್ಲಿ ಮೊಬೈಲ್ ಕಳ್ಳತನ: ಸೆರೆ</p><p>ಬೆಂಗಳೂರು: ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಮಾರತ್ಹಳ್ಳಿಯ ಚೇತನ್ ಬಂಧಿತ.</p><p>ಆರೋಪಿಯಿಂದ ₹2 ಲಕ್ಷ ಮೌಲ್ಯದ ಎಂಟು ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p>‘ಟಿಕೆಟ್ ಪಡೆದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ, ಬಸ್ನಲ್ಲಿ ನಿದ್ರಿಸುವ ಪ್ರಯಾಣಿಕರನ್ನೇ ಗುರಿಯಾಗಿಸಿ ಮೊಬೈಲ್ ಕಳವು ಮಾಡುತ್ತಿದ್ದ. ಈ ರೀತಿ ಕಳ್ಳತವನ್ನೇ ಹವ್ಯಾಸ ಮಾಡಿಕೊಂಡಿದ್ದ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮಾರತ್ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಆರೋಪಿ ಬಂಧಿಸಲಾಯಿತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್ವೊಂದರಲ್ಲಿ ರಿಪೇರಿ ಮಾಡುತ್ತಿದ್ದ ವೇಳೆ ಬಸ್ ಚಲಿಸಿದ ಪರಿಣಾಮ ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ವರ್ತೂರು ನಿವಾಸಿ ವಿಜಯ್ (35) ಮೃತ ಮೆಕ್ಯಾನಿಕ್. ಮತ್ತೊಬ್ಬ ಯುವಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ಶಾಲೆಯೊಂದರ ಬಸ್ ಕೆಟ್ಟಿತ್ತು. ಬಸ್ ಅನ್ನು ರಿಪೇರಿಗಾಗಿ ಗ್ಯಾರೇಜ್ಗೆ ಬಿಡಲಾಗಿತ್ತು. ಮಂಗಳವಾರ ಸಂಜೆ ವಿಜಯ್ ಮತ್ತು ಅವರ ಸಹಾಯಕ ರಿಪೇರಿ ಮಾಡುತ್ತಿದ್ದರು. ಬಸ್ ಕೆಳಭಾಗ ದಲ್ಲಿ ವಿಜಯ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ತನ್ನ ಸಹಾಯಕನಿಗೆ ಬಸ್ ಸ್ಟಾರ್ಟ್ ಮಾಡುವಂತೆ ಸೂಚಿಸಿದ್ದರು. ಬಸ್ ಸ್ಟಾರ್ಟ್ ಮಾಡುತ್ತಿದ್ದಂತೆಯೇ ಏಕಾಏಕಿ ಚಲಿಸಿದ್ದರಿಂದ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.</p><p>ಬಸ್ನಲ್ಲಿ ಮೊಬೈಲ್ ಕಳ್ಳತನ: ಸೆರೆ</p><p>ಬೆಂಗಳೂರು: ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಮಾರತ್ಹಳ್ಳಿಯ ಚೇತನ್ ಬಂಧಿತ.</p><p>ಆರೋಪಿಯಿಂದ ₹2 ಲಕ್ಷ ಮೌಲ್ಯದ ಎಂಟು ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p>‘ಟಿಕೆಟ್ ಪಡೆದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ, ಬಸ್ನಲ್ಲಿ ನಿದ್ರಿಸುವ ಪ್ರಯಾಣಿಕರನ್ನೇ ಗುರಿಯಾಗಿಸಿ ಮೊಬೈಲ್ ಕಳವು ಮಾಡುತ್ತಿದ್ದ. ಈ ರೀತಿ ಕಳ್ಳತವನ್ನೇ ಹವ್ಯಾಸ ಮಾಡಿಕೊಂಡಿದ್ದ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮಾರತ್ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಆರೋಪಿ ಬಂಧಿಸಲಾಯಿತು. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>