<p><strong>ಬೆಂಗಳೂರು</strong>: ‘ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸಂಗೀತ, ನೃತ್ಯಗಳಂತಹ ಕಲೆಗಳನ್ನು ಉಳಿಸಿ ಬೆಳೆಸಲು ಮಾಧ್ಯಮಗಳ ಪ್ರೋತ್ಸಾಹ ಅತ್ಯಗತ್ಯ’ ಎಂದು ಕರ್ನಾಟಕ ಸಂಗೀತ ವಿದ್ವಾಂಸ ಆರ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು. </p>.<p>ಶ್ರೀಮದ್ ವಾದಿರಾಜ ಆರಾಧನಾ ಟ್ರಸ್ಟ್, ಶಾರದಾ ಕಲಾಕೇಂದ್ರ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಾಗ್ಗೇಯಕಾರರ ಆರಾಧನೋತ್ಸವ ಕಾರ್ಯಕ್ರಮದಲ್ಲಿ ‘ಸುಧಾ’ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಪುಸ್ತಕ ಬಿಡುಗಡೆ ಮಾಡಿ, ಮಾತನಾಡಿದರು.</p>.<p>‘ಕಲಾ ಪ್ರಕಾರಗಳು ಉಳಿಯಬೇಕಾದರೆ ಪತ್ರಿಕೆಗಳು ಸ್ವಲ್ಪಮಟ್ಟಿನ ಜಾಗವನ್ನಾದರೂ ಕಲೆಗೆ ಮೀಸಲಿಡಬೇಕು. ಇತ್ತೀಚೆಗೆ ಮಾಧ್ಯಮಗಳಲ್ಲಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಅಷ್ಟಾಗಿ ಆದ್ಯತೆ ಸಿಗುತ್ತಿಲ್ಲ. ಇದರಿಂದ ಸಾಂಸ್ಕೃತಿಕ ಜಗತ್ತು ಬಡವಾಗುತ್ತಿದೆಯೋ ಎಂಬ ಆತಂಕ ಕಾಡುತ್ತಿದೆ’ ಎಂದರು.</p>.<p>‘ಕಲಾವಿದರಿಗೆ ಗೌರವ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿಯಾದರೂ ಮಾಧ್ಯಮಗಳು ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಬೇಕು. ಹೀಗಾದಲ್ಲಿ ಮಾತ್ರ ಮುಂದಿನ ಪೀಳಿಗೆಗೆ ಸಂಗೀತ ಸೇರಿ ವಿವಿಧ ಕಲಾ ಪ್ರಕಾರಗಳು ಉಳಿಯುತ್ತವೆ’ ಎಂದು ಹೇಳಿದರು.</p>.<p>ಉಮಾ ಅನಂತ್, ‘ಸಂಗೀತಗಾರರಿಗೆ ಕೇಳುಗರೇ ಜೀವಾಳವಿದ್ದಂತೆ, ಬರಹಗಾರರು ಹಾಗೂ ಪತ್ರಿಕೆಗಳಿಗೆ ಓದುಗರೇ ಜೀವಾಳ. ಈ ನಿಟ್ಟಿನಲ್ಲಿ ಯುವ ಪೀಳಿಗೆಯಲ್ಲಿ ಓದುವ ಹವ್ಯಾಸದ ಜೊತೆಗೆ ಸುಮಧುರ ಸಂಗೀತ ಕೇಳುವ ಹವ್ಯಾಸವೂ ಇರಬೇಕು. ಆಗ ಮಾತ್ರ ಸಮಾಜದಲ್ಲಿ ಸದ್ಭಾವನೆ ಮೂಡಲು ಸಾಧ್ಯ’ ಎಂದರು.</p>.<p>ಬಳಿಕ ಬೆಂಗಳೂರು ಸಹೋದರರಾದ ಹರಿಹರನ್ ಹಾಗೂ ಅಶೋಕ್ ಅವರ ಯುಗಳ ಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸಂಗೀತ, ನೃತ್ಯಗಳಂತಹ ಕಲೆಗಳನ್ನು ಉಳಿಸಿ ಬೆಳೆಸಲು ಮಾಧ್ಯಮಗಳ ಪ್ರೋತ್ಸಾಹ ಅತ್ಯಗತ್ಯ’ ಎಂದು ಕರ್ನಾಟಕ ಸಂಗೀತ ವಿದ್ವಾಂಸ ಆರ್.ಕೆ.ಪದ್ಮನಾಭ ಅಭಿಪ್ರಾಯಪಟ್ಟರು. </p>.<p>ಶ್ರೀಮದ್ ವಾದಿರಾಜ ಆರಾಧನಾ ಟ್ರಸ್ಟ್, ಶಾರದಾ ಕಲಾಕೇಂದ್ರ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಾಗ್ಗೇಯಕಾರರ ಆರಾಧನೋತ್ಸವ ಕಾರ್ಯಕ್ರಮದಲ್ಲಿ ‘ಸುಧಾ’ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಪುಸ್ತಕ ಬಿಡುಗಡೆ ಮಾಡಿ, ಮಾತನಾಡಿದರು.</p>.<p>‘ಕಲಾ ಪ್ರಕಾರಗಳು ಉಳಿಯಬೇಕಾದರೆ ಪತ್ರಿಕೆಗಳು ಸ್ವಲ್ಪಮಟ್ಟಿನ ಜಾಗವನ್ನಾದರೂ ಕಲೆಗೆ ಮೀಸಲಿಡಬೇಕು. ಇತ್ತೀಚೆಗೆ ಮಾಧ್ಯಮಗಳಲ್ಲಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಅಷ್ಟಾಗಿ ಆದ್ಯತೆ ಸಿಗುತ್ತಿಲ್ಲ. ಇದರಿಂದ ಸಾಂಸ್ಕೃತಿಕ ಜಗತ್ತು ಬಡವಾಗುತ್ತಿದೆಯೋ ಎಂಬ ಆತಂಕ ಕಾಡುತ್ತಿದೆ’ ಎಂದರು.</p>.<p>‘ಕಲಾವಿದರಿಗೆ ಗೌರವ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿಯಾದರೂ ಮಾಧ್ಯಮಗಳು ಸಾಂಸ್ಕೃತಿಕ ಲೋಕವನ್ನು ಶ್ರೀಮಂತಗೊಳಿಸಬೇಕು. ಹೀಗಾದಲ್ಲಿ ಮಾತ್ರ ಮುಂದಿನ ಪೀಳಿಗೆಗೆ ಸಂಗೀತ ಸೇರಿ ವಿವಿಧ ಕಲಾ ಪ್ರಕಾರಗಳು ಉಳಿಯುತ್ತವೆ’ ಎಂದು ಹೇಳಿದರು.</p>.<p>ಉಮಾ ಅನಂತ್, ‘ಸಂಗೀತಗಾರರಿಗೆ ಕೇಳುಗರೇ ಜೀವಾಳವಿದ್ದಂತೆ, ಬರಹಗಾರರು ಹಾಗೂ ಪತ್ರಿಕೆಗಳಿಗೆ ಓದುಗರೇ ಜೀವಾಳ. ಈ ನಿಟ್ಟಿನಲ್ಲಿ ಯುವ ಪೀಳಿಗೆಯಲ್ಲಿ ಓದುವ ಹವ್ಯಾಸದ ಜೊತೆಗೆ ಸುಮಧುರ ಸಂಗೀತ ಕೇಳುವ ಹವ್ಯಾಸವೂ ಇರಬೇಕು. ಆಗ ಮಾತ್ರ ಸಮಾಜದಲ್ಲಿ ಸದ್ಭಾವನೆ ಮೂಡಲು ಸಾಧ್ಯ’ ಎಂದರು.</p>.<p>ಬಳಿಕ ಬೆಂಗಳೂರು ಸಹೋದರರಾದ ಹರಿಹರನ್ ಹಾಗೂ ಅಶೋಕ್ ಅವರ ಯುಗಳ ಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>