ದೂರಿನ ವಿವರ: ‘ನನ್ನ ಮಗ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣನಾಗಿದ್ದು, 2018ರ ನೀಟ್ನಲ್ಲಿ ಉತ್ತಮ ರ್ಯಾಂಕ್ ಪಡೆಯದಿದ್ದರಿಂದ ಎಂಬಿಬಿಎಸ್ ಸೀಟು ಸಿಕ್ಕಿರಲಿಲ್ಲ. ಅದೇ ವೇಳೆ ಮೊಬೈಲ್ಗೆ ಸಂದೇಶ ಕಳುಹಿಸಿದ್ದ ಆರೋಪಿಗಳು, ‘ಕಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟುಗಳು ಖಾಲಿ ಇವೆ. ₹ 60 ಲಕ್ಷ ಕೊಟ್ಟರೆ ಕೊಡಿಸುತ್ತೇವೆ’ ಎಂಬುದಾಗಿ ಆಮಿಷವೊಡ್ಡಿದ್ದರು’ ಎಂದು ಪ್ರಶಾಂತ್ ದೂರಿನಲ್ಲಿ ತಿಳಿಸಿದ್ದಾರೆ.