<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಸರ್ಕಾರಿ ತಿಗಳ ನೌಕರರ/ ವೃತ್ತಿಪರರ ಸಂಘವು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಹುಸ್ಕೂರಿನ ವೈದ್ಯ ವಿದ್ಯಾರ್ಥಿನಿ ಶಿಲ್ಪಾಶ್ರೀ ಅವರಿಗೆ ₹1 ಲಕ್ಷ ಸಹಾಯಧನ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ನ ಮಾಜಿ ಸದಸ್ಯ ಪಿ.ಆರ್. ರಮೇಶ್ ಮಾತನಾಡಿ, ‘ಹಿಂದುಳಿದ ವರ್ಗಗಳ ಇಲಾಖೆಯಿಂದ ₹5 ಲಕ್ಷದವರೆಗೆ ಹಣಕಾಸಿನ ನೆರವನ್ನು ಸಾಲದ ರೂಪದಲ್ಲಿ ಕೊಡಿಸುತ್ತೇನೆ. ಸಂಘವು ಇಂತಹ ಉತ್ತಮ ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ಮಾಡಬೇಕು’ ಎಂದರು.</p>.<p>ಸಂಘದ ಸಲಹೆಗಾರ ರಾಜ್ಕೃಷ್ಣಮೂರ್ತಿ ಮಾತನಾಡಿ, ‘ಸಮುದಾಯದ ವಿದ್ಯಾವಂತ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಬೇಕು. ಇದಕ್ಕಾಗಿ ವಿವಿಧ ಕಂಪನಿಗಳ ಮಾಲೀಕರೊಂದಿಗೆ ಮಾತುಕತೆ ಮಾಡಬೇಕು’ ಎಂದು ಸಲಹೆ ನೀಡಿದರು. </p>.<p>ಸಂಘದ ಅಧ್ಯಕ್ಷ ಎಲ್.ಎ. ಮಂಜುನಾಥ್ ಮಾತನಾಡಿ, ‘ಶಿಲ್ಪಾಶ್ರೀ ಅವರು ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದು, ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದರು. ನಂತರ ಆರ್ಥಿಕ ಸಹಾಯ ನೀಡುವಂತೆ ನಮ್ಮ ಸಂಘಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸಿ, ₹1 ಲಕ್ಷ ಸಹಾಯಧನ ನೀಡಲಾಗಿದೆ’ ಎಂದು ತಿಳಿಸಿದರು. </p>.<p>ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಮುನಿರಾಜಪ್ಪ, ಖಜಾಂಚಿ ರಾಜಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಸರ್ಕಾರಿ ತಿಗಳ ನೌಕರರ/ ವೃತ್ತಿಪರರ ಸಂಘವು ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಹುಸ್ಕೂರಿನ ವೈದ್ಯ ವಿದ್ಯಾರ್ಥಿನಿ ಶಿಲ್ಪಾಶ್ರೀ ಅವರಿಗೆ ₹1 ಲಕ್ಷ ಸಹಾಯಧನ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ನ ಮಾಜಿ ಸದಸ್ಯ ಪಿ.ಆರ್. ರಮೇಶ್ ಮಾತನಾಡಿ, ‘ಹಿಂದುಳಿದ ವರ್ಗಗಳ ಇಲಾಖೆಯಿಂದ ₹5 ಲಕ್ಷದವರೆಗೆ ಹಣಕಾಸಿನ ನೆರವನ್ನು ಸಾಲದ ರೂಪದಲ್ಲಿ ಕೊಡಿಸುತ್ತೇನೆ. ಸಂಘವು ಇಂತಹ ಉತ್ತಮ ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ಮಾಡಬೇಕು’ ಎಂದರು.</p>.<p>ಸಂಘದ ಸಲಹೆಗಾರ ರಾಜ್ಕೃಷ್ಣಮೂರ್ತಿ ಮಾತನಾಡಿ, ‘ಸಮುದಾಯದ ವಿದ್ಯಾವಂತ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಬೇಕು. ಇದಕ್ಕಾಗಿ ವಿವಿಧ ಕಂಪನಿಗಳ ಮಾಲೀಕರೊಂದಿಗೆ ಮಾತುಕತೆ ಮಾಡಬೇಕು’ ಎಂದು ಸಲಹೆ ನೀಡಿದರು. </p>.<p>ಸಂಘದ ಅಧ್ಯಕ್ಷ ಎಲ್.ಎ. ಮಂಜುನಾಥ್ ಮಾತನಾಡಿ, ‘ಶಿಲ್ಪಾಶ್ರೀ ಅವರು ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದು, ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದರು. ನಂತರ ಆರ್ಥಿಕ ಸಹಾಯ ನೀಡುವಂತೆ ನಮ್ಮ ಸಂಘಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸಿ, ₹1 ಲಕ್ಷ ಸಹಾಯಧನ ನೀಡಲಾಗಿದೆ’ ಎಂದು ತಿಳಿಸಿದರು. </p>.<p>ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಮುನಿರಾಜಪ್ಪ, ಖಜಾಂಚಿ ರಾಜಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>