ವಿಚಾರಣಾಧೀನ ಕೈದಿ ಸಂಜು ಅಲಿಯಾಸ್ ಸಂಜೀವ್ ಕುಮಾರ್ ಎಂಬವರ ಸಾವಿಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ, ಕೈದಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಹೇಳಿದೆ. ಹೀಗಾಗಿ, ಗಾಯಗೊಂಡ ವ್ಯಕ್ತಿ ಅಥವಾ ಬಂಧಿತ ವ್ಯಕ್ತಿಯನ್ನು ಅಧಿಕಾರಿ ಎದುರು ಹಾಜರುಪಡಿಸುವುದಕ್ಕೂ ಮೊದಲು ಸಮೀಪದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದ ಚಿಕಿತ್ಸೆ ಕೊಡಿಸಲು ಪ್ರಥಮ ಆದ್ಯತೆ ನೀಡಬೇಕು.