ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಗೆ ₹520 ಕೋಟಿ ಮಂಜೂರು ಮಾಡಿದ ಬ್ಯಾಂಕ್‌ ಆಫ್ ಬರೋಡಾ

Last Updated 24 ಅಕ್ಟೋಬರ್ 2019, 6:43 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಆಹಾರ ದಿನದ ಅಂಗವಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಹೊಸಕೋಟೆ ಬಳಿ ಆಯೋಜಿಸಿದ್ದ ‘ಮೆಗಾ ಕೃಷಿ ಮೇಳ’ವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಿದರು.

ವಿವಿಧ ಸಾಲ ಸೌಲಭ್ಯಗಳಡಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳ ಫಲಾನುಭವಿಗಳಿಗೆ ಅವರು ಚೆಕ್‌ ವಿತರಿಸಿ, ರೈತರು ತಂತ್ರಜ್ಞಾನದ ಲಾಭ ‍ಪಡೆಯಬೇಕು ಎಂದರು.

ಬ್ಯಾಂಕ್‌ ಆಫ್‌ ಬರೋಡಾ ಬೆಂಗಳೂರು ವಲಯವು ಕೃಷಿ ಹಾಗೂ ರೈತರ ಅಭಿವೃದ್ಧಿಗಾಗಿ ₹520 ಕೋಟಿ ಮಂಜೂರು ಮಾಡಿತು. ಕಾರ್ಯಕ್ರಮದಲ್ಲಿ ಐವರು ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಮೇಳದಲ್ಲಿ ಕೃಷಿ ತಳಿಗಳು, ಯಂತ್ರೋಪಕರಣಗಳು, ನೀರಾವರಿ ತಂತ್ರಜ್ಞಾನಗಳು ಹಾಗೂ ತೋಟಗಾರಿಕಾ ನೂತನ ತಳಿಗಳ ಪ್ರದರ್ಶನಕ್ಕಾಗಿ 50ಕ್ಕೂ ಹೆಚ್ಚು ಮಳಿಗೆಗಳಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT