‘ಬಿಸಿಲು, ಮಳೆ, ಚಳಿ, ಗಾಳಿ ಎನ್ನದೇ ತಳ್ಳುಗಾಡಿಯಲ್ಲಿ ಕಿ.ಮೀ.ಗಟ್ಟಲೇ ಸುತ್ತಾಡಿ ವ್ಯಾಪಾರ ಮಾಡುವ ವ್ಯಕ್ತಿಗಳ ಬಗ್ಗೆ ಕನಿಕರ ಇರಬೇಕು. ಆರ್ಥಿಕವಾಗಿ ಹಿಂದುಳಿದ ವ್ಯಾಪಾರಿಗಳು, ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಜರ್ಜರಿತರಾಗಿದ್ದಾರೆ. ಇವರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಮೊದಲನೇ ದಿನ ಸಂಬಳ ಬಂದು ಬೀಳುವುದಿಲ್ಲ ಎಂಬುದನ್ನು ನೀವು ಅರಿತುಕೊಳ್ಳಬೇಕು’ ಎಂದೂ ಹೇಳಿದ್ದಾರೆ.