ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಅಧ್ಯಕ್ಷ ಮಂಜೇಗೌಡ, ‘ಮೇಕೆದಾಟು ಅಣೆಕಟ್ಟನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಸುಮ್ಮನಾಗಿದೆ. ಇದರಿಂದ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ನಮಗೆ ನಿಮ್ಮ ಯಾವುದೇ ‘ಗ್ಯಾರಂಟಿ’ಗಳು ಬೇಕಿಲ್ಲ. ಬದಲಾಗಿ ನೀರನ್ನು ಒದಗಿಸಿ’ ಎಂದು ಆಗ್ರಹಿಸಿದರು.